ಬ್ರೇಕಿಂಗ್ ನ್ಯೂಸ್
24-08-22 12:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ರಾತ್ರಿ ವೇಳೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿದ್ದು ಯಕ್ಷಗಾನ ಮೇಳಕ್ಕೂ ತಟ್ಟಿದೆ. ರಾಜ್ಯ ಸರಕಾರದ ಆದೇಶದಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆರು ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಕಾಲಮಿತಿಗೆ ಬದಲಾಯಿಸಲು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದೆ.
ಇಡೀ ರಾತ್ರಿ ಯಕ್ಷಗಾನ ನಡೆಸುವ ಬದಲು ಸಂಜೆಯಿಂದ ರಾತ್ರಿ 11 ಗಂಟೆ ವೇಳೆಗೆ ಮುಗಿಸಲು ನಿರ್ಧರಿಸಲಾಗಿದೆ. ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್ಗಿಂತ ಹೆಚ್ಚಿನ ಮಿತಿಯ ಧ್ವನಿವರ್ಧಕ ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸಲು ಕಟೀಲು ದೇವಳದ ಯಕ್ಷಗಾನ ಮೇಳಗಳ ಆಡಳಿತ ಮಂಡಳಿಯೂ ನಿರ್ಧಾರಕ್ಕೆ ಬಂದಿದೆ.
ಪ್ರತಿ ವರ್ಷ ನವೆಂಬರ್ ನಿಂದ ತೊಡಗಿ ಮೇ ಕೊನೆಯ ವರೆಗೆ ಆರು ತಿಂಗಳ ಕಾಲ ಯಕ್ಷಗಾನ ಮೇಳಗಳ ತಿರುಗಾಟ ಇರುತ್ತದೆ. ರಾತ್ರಿ 10ರಿಂದ ತೊಡಗಿ ಬೆಳಗ್ಗಿನ ಆರು ಗಂಟೆ ವರೆಗೂ ಯಕ್ಷಗಾನ ಇರುತ್ತದೆ. ಆದರೆ ಧ್ವನಿವರ್ಧಕಕ್ಕೆ ಮಿತಿ ಹೇರಿರುವುದು ಮತ್ತು ರಾತ್ರಿಯಿಡೀ ಪ್ರೇಕ್ಷಕರ ಸಂಖ್ಯೆಯೂ ಕಡಿಮೆಯಾಗಿದ್ದರಿಂದ ಕಾಲಮಿತಿ ಯಕ್ಷಗಾನ ಹೆಚ್ಚು ಪ್ರಚಲಿತವಾಗುತ್ತಿದೆ. ಇದೇ ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ರ ವರೆಗೆ ಕಟೀಲು ಮೇಳದ ಯಕ್ಷಗಾನ ಸೇವೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Mangalore Kateel Mela Yakshagana artistes anxious after loudspeaker order. Artistes, especially those dabbling in folklore, are on tenterhooks over the recent state government circular on the use of loudspeakers.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm