ಬ್ರೇಕಿಂಗ್ ನ್ಯೂಸ್
24-08-22 12:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ರಾತ್ರಿ ವೇಳೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿದ್ದು ಯಕ್ಷಗಾನ ಮೇಳಕ್ಕೂ ತಟ್ಟಿದೆ. ರಾಜ್ಯ ಸರಕಾರದ ಆದೇಶದಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆರು ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಕಾಲಮಿತಿಗೆ ಬದಲಾಯಿಸಲು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದೆ.
ಇಡೀ ರಾತ್ರಿ ಯಕ್ಷಗಾನ ನಡೆಸುವ ಬದಲು ಸಂಜೆಯಿಂದ ರಾತ್ರಿ 11 ಗಂಟೆ ವೇಳೆಗೆ ಮುಗಿಸಲು ನಿರ್ಧರಿಸಲಾಗಿದೆ. ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್ಗಿಂತ ಹೆಚ್ಚಿನ ಮಿತಿಯ ಧ್ವನಿವರ್ಧಕ ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸಲು ಕಟೀಲು ದೇವಳದ ಯಕ್ಷಗಾನ ಮೇಳಗಳ ಆಡಳಿತ ಮಂಡಳಿಯೂ ನಿರ್ಧಾರಕ್ಕೆ ಬಂದಿದೆ.
ಪ್ರತಿ ವರ್ಷ ನವೆಂಬರ್ ನಿಂದ ತೊಡಗಿ ಮೇ ಕೊನೆಯ ವರೆಗೆ ಆರು ತಿಂಗಳ ಕಾಲ ಯಕ್ಷಗಾನ ಮೇಳಗಳ ತಿರುಗಾಟ ಇರುತ್ತದೆ. ರಾತ್ರಿ 10ರಿಂದ ತೊಡಗಿ ಬೆಳಗ್ಗಿನ ಆರು ಗಂಟೆ ವರೆಗೂ ಯಕ್ಷಗಾನ ಇರುತ್ತದೆ. ಆದರೆ ಧ್ವನಿವರ್ಧಕಕ್ಕೆ ಮಿತಿ ಹೇರಿರುವುದು ಮತ್ತು ರಾತ್ರಿಯಿಡೀ ಪ್ರೇಕ್ಷಕರ ಸಂಖ್ಯೆಯೂ ಕಡಿಮೆಯಾಗಿದ್ದರಿಂದ ಕಾಲಮಿತಿ ಯಕ್ಷಗಾನ ಹೆಚ್ಚು ಪ್ರಚಲಿತವಾಗುತ್ತಿದೆ. ಇದೇ ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ರ ವರೆಗೆ ಕಟೀಲು ಮೇಳದ ಯಕ್ಷಗಾನ ಸೇವೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Mangalore Kateel Mela Yakshagana artistes anxious after loudspeaker order. Artistes, especially those dabbling in folklore, are on tenterhooks over the recent state government circular on the use of loudspeakers.
27-02-26 10:17 pm
HK News Desk
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
ವರನಟ ಡಾ.ರಾಜ್ ಅಪಹರಣ ಪ್ರಕರಣ ; ಬರೋಬ್ಬರಿ 25 ವರ್ಷಗ...
25-02-26 07:54 pm
27-02-26 03:55 pm
HK News Staffer
ಲಂಚ ಆರೋಪದಲ್ಲಿ ಸಿಕ್ಕಿಬಿದ್ದ ಗಣಿ ಉಪ ನಿರ್ದೇಶಕರ ಮನ...
27-02-26 06:14 am
ಮಾರ್ಚ್ 11ರಿಂದ ಅನಿರ್ದಿಷ್ಟ ಮುಷ್ಕರ ; ರಾಜ್ಯಾದ್ಯಂತ...
25-02-26 10:10 pm
ಮಧ್ಯಪ್ರದೇಶದಲ್ಲಿ ಹೊಸ ರೀತಿಯ ಮತಾಂತರ ಜಾಲ ; ಹಿಂದು...
25-02-26 03:38 pm
ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ; ಮತ್ತೆ ಭುಗಿಲೆ...
24-02-26 01:21 pm
27-02-26 08:59 pm
Mangalore Correspondent
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
Kuntikana Kidnap, False: ಕುಂಟಿಕಾನದಲ್ಲಿ ಮಕ್ಕಳು...
27-02-26 05:00 pm
27-02-26 09:23 pm
Mangalore Correspondent
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm
ಹವಾಲಾ ಹಣದ ಭಾರವೇ ಸಿಜೆ ರಾಯ್ ಪ್ರಾಣ ತೆಗೆಯಿತಾ?! ಕ...
26-02-26 04:45 pm