ಉಳ್ಳಾಲ ; ಕಾರು ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವು ! 

24-08-22 10:10 pm       Mangalore Correspondent   ಕರಾವಳಿ

ರಾ.ಹೆ. 66ರ ಉಚ್ಚಿಲ- ಸಂಕೊಳಿಗೆ ಎಂಬಲ್ಲಿ ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. 

ಉಳ್ಳಾಲ, ಆ.24 : ರಾ.ಹೆ. 66ರ ಉಚ್ಚಿಲ- ಸಂಕೊಳಿಗೆ ಎಂಬಲ್ಲಿ ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. 

ಮೂಲತಃ ಉಚ್ಚಿಲ, ಅಕ್ಕರೆಯ ಸದ್ಯ ಉಚ್ಚಿಲ ಬೀಚ್ ಬಳಿಯ ಬಾಡಿಗೆ ಮನೆ ನಿವಾಸಿ ಶ್ರೀನಿವಾಸ ಆಚಾರ್ಯ(51)ಮೃತ ದುರ್ದೈವಿ. ಶ್ರೀನಿವಾಸ ಅವರು ಸಂಕೊಳಿಗೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ತಲಪಾಡಿ ಕಡೆಗೆ ಧಾವಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದ್ದು ಬಳಿಕ ಎದುರಲ್ಲಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾಗಿ ನಜ್ಜು ಗುಜ್ಜಾಗಿದೆ. ಅಪಘಾತದ ರಭಸಕ್ಕೆ ಶ್ರೀನಿವಾಸ್ ಅವರು ಸ್ಥಳದಲ್ಲೇ ಅಸುನೀಗಿದ್ದಾರೆ. 

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಕಾರು ಮತ್ತು ಲಾರಿ ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾರ್ಪೆಂಟರ್ ಉದ್ಯೋಗಿಯಾಗಿದ್ದ ಮೃತ ಶ್ರೀನಿವಾಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ullal accident Pedestrian dies on spot after speeding car rams on him in Mangalore. The deceased has been identified as Srinivas Acharaya (51) from Uchila.