ಬ್ರೇಕಿಂಗ್ ನ್ಯೂಸ್
06-10-20 04:04 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 06: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ ದಾಳಿ ನಡೆಸಿದ್ದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಮೆರವಣಿಗೆ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅಜ್ಜರಕಾಡಿನ ಸೈನಿಕ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಅಲ್ಲಿ ಸುಮಾರು ಅರ್ಧ ಗಂಟೆ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಜೆಪಿಯವರು ಕಾಂಗ್ರೆಸ್ ಮುಖಂಡರ ಬಾಯಿ ಮುಚ್ಚಿಸಲು ಯತ್ನಿಸುತ್ತಿದ್ದಾರೆ. ಪದೇ ಪದೇ ಸಿಬಿಐ ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡರ ಧೈರ್ಯ ಕುಂದಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆದರೆ ಬಿಜೆಪಿಯ ಈ ಪ್ರಯತ್ನ ಫಲ ನೀಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಡಿ.ಕೆ ಶಿವಕುಮಾರ್ ನಮ್ಮ ಮುಖಂಡರು. ಅವರ ಪರವಾಗಿ ನಾವೆಲ್ಲ ಇದ್ದೇವೆ, ಡಿ.ಕೆ ಶಿವಕುಮಾರ್ ಯಾವತ್ತಿದ್ದರೂ ಬಂಡೆಯೇ. ಅವರ ಅಷ್ಟೂ ಕಚೇರಿಗಳ ಮೇಲೆ ದಾಳಿ ನಡೆಸಿದಾಗ ಅವರಿಗೆ ಸಿಕ್ಕಿದ್ದು ಕೇವಲ 57 ಲಕ್ಷ ರುಪಾಯಿ ಮಾತ್ರ. ದೆಹಲಿ, ಬೆಂಗಳೂರು, ಮುಂಬೈ ಎಲ್ಲ ಸೇರಿ ಇಷ್ಟೇ ಸಿಕ್ಕಿದ್ದು ಅಲ್ಲವೇ ಎಂದು ಪ್ರಶ್ನೆ ಮಾಡಿದ್ರು.
ಒಂದ್ವೇಳೆ ಇದೇ ರೀತಿ ಬಿಜೆಪಿ ಪಕ್ಷದ ಶಾಸಕರು ಮತ್ತು ಮಂತ್ರಿಗಳ ಮನೆ ಮೇಲೆ ದಾಳಿ ನಡೆಸಿದರೆ ಕೋಟ್ಯಂತರ ರೂ. ಸಿಗುತ್ತದೆ. ತಾಕತ್ತಿದ್ದರೆ ಆ ಕೆಲಸ ಮಾಡಿ ಎಂದು ಉಡುಪಿ ಕಾಂಗ್ರೆಸ್ ಮುಖಂಡರು ಸವಾಲು ಹಾಕಿದರು. ಅರ್ಧ ತಾಸು ರಸ್ತೆ ತಡೆ ನಡೆಸಿದ ಪ್ರತಿಭಟನಕಾರರನ್ನು ಬಳಿಕ ಪೊಲೀಸರು ಬಂಧಿಸಿ, ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ , ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ, ಹರೀಶ ಕಿಣಿ, ಯತೀಶ್ ಕರ್ಕೇರ, ನವೀನ್ಚಂದ್ರ ಶೆಟ್ಟಿ, ಗೀತಾ ವಾಗ್ಲೆ, ಮುರಳಿ ಶೆಟ್ಟಿ, ವೆರೊನಿಕಾ ಕಾರ್ನೆಲಿಯೊ, ಜ್ಯೋತಿ ಹೆಬ್ಬಾರ್, ರೋಶನಿ ಓಲಿವರ್ ಮತ್ತಿತರರು ಇದ್ದರು.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm