ಬ್ರೇಕಿಂಗ್ ನ್ಯೂಸ್
27-08-22 01:20 pm Mangalore Correspondent ಕರಾವಳಿ
ಉಳ್ಳಾಲ, ಆ.27: ಶ್ರಾವಣ ಅಮವಾಸ್ಯೆ ಪ್ರಯುಕ್ತ ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ಕಡಲಲ್ಲಿ ಸಹಸ್ರಾರು ಮಂದಿ ಭಕ್ತರು ಪವಿತ್ರ ತೀರ್ಥ ಸ್ನಾನ ಮಾಡಿ ಪುನೀತರಾದರು.
ಸೋಮೇಶ್ವರದ ಸೋಮನಾಥ ದೇವಸ್ಥಾನದ ಸಾಂಪ್ರದಾಯಿಕ ಉತ್ಸವಗಳಲ್ಲಿ ಶ್ರಾವಣ ಅಮವಾಸ್ಯೆಯ ಪವಿತ್ರ ಸಮುದ್ರ ತೀರ್ಥ ಸ್ನಾನವು ಪ್ರಾಮುಖ್ಯತೆ ಪಡೆದಿದೆ. ಮಳೆಗಾಲದಲ್ಲಿ ಪ್ರಕ್ಷುಬ್ಧಗೊಳ್ಳುವ ಕಡಲು ಶ್ರಾವಣ ಮಾಸದಲ್ಲಿ ಶಾಂತವಾಗುವುದರ ಜೊತೆಗೆ ಕಡಲ ನೀರಲ್ಲಿ ಔಷಧೀಯ ಗುಣದ ಲವಣಾಂಶಗಳು ಸಮೃದ್ಧಿಗೊಂಡಿರುತ್ತದೆ. ಈ ನೀರಲ್ಲಿ ಸ್ನಾನ ಮಾಡಿದರೆ ಚರ್ಮ ವ್ಯಾಧಿ ಮಾತ್ರವಲ್ಲದೆ ಇನ್ನಿತರ ಕಾಯಿಲೆಗಳು ದೂರವಾಗುತ್ತದೆ ಎಂಬ ನಂಬಿಕೆಯಿದೆ.
ಭಕ್ತರು ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರದ ಸಮುದ್ರದಲ್ಲಿ ಪವಿತ್ರ ತೀರ್ಥ ಸ್ನಾನವೆಂಬ ಧಾರ್ಮಿಕ ನಂಬಿಕೆ ಮತ್ತು ವೈಜ್ಞಾನಿಕ ಅರಿವಿನಿಂದ ಸ್ನಾನ ಮಾಡಿ ಪುನೀತರಾಗುತ್ತಾರೆ. ಭಕ್ತರು ವೀಳ್ಯ, ತೆಂಗಿನ ಕಾಯಿಯನ್ನು ಸಮುದ್ರರಾಜನಿಗೆ ಅರ್ಪಿಸಿ ನಂತರ ಸಮುದ್ರ ಸ್ನಾನ ಮಾಡಿ ಕಡ್ಡಾಯವಲ್ಲದಿದ್ದರೂ ಸಮೀಪದ ಗದಾ ತೀರ್ಥ ಕೆರೆಯಲ್ಲಿ ಸ್ನಾನ ಮಾಡಿ ದೇವಸ್ಥಾನಕ್ಕೆ ತೆರಳುತ್ತಾರೆ. ಸಮುದ್ರದಲ್ಲಿ ತೀರ್ಥ ಸ್ನಾನ ಮಾಡುವ ಸಂದರ್ಭ ಯಾವುದೇ ಅನಾಹುತಗಳು ನಡೆಯದಂತೆ ನುರಿತ ಜೀವರಕ್ಷಕ ಸಿಬ್ಬಂದಿಗಳು ಕಣ್ಗಾವಲು ಇಟ್ಟಿದ್ದರು. ದೇವಸ್ಥಾನಕ್ಕೆ ತೆರಳಿದ ಭಕ್ತರು ಸೋಮನಾಥನಿಗೆ ಪ್ರಿಯವಾದ ಸೇವೆಗಳನ್ನ ಸಲ್ಲಿಸಿ ಕೃತಾರ್ಥರಾದರು.
ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರ ಕ್ಷೇತ್ರದಲ್ಲಿ ಗೃಹ ಮತ್ತು ಕೃಷಿ ಬಳಕೆಯ ವಿವಿಧ ರೀತಿಯ ಕತ್ತಿಗಳ ವ್ಯಾಪಾರ ಜೋರಾಗಿರುತ್ತದೆ. ಕೃಷಿ ಚಟುವಟಿಕೆ ಆರಂಭದ ಸಮಯವಾದುದರಿಂದ ಸಹಸ್ರಾರು ಮಂದಿ ಸೇರುವ ತೀರ್ಥ ಸ್ನಾನದ ಸಂಧರ್ಭದಲ್ಲಿ ಹಿಂದಿನಿಂದಲೂ ಇಲ್ಲಿ ಕತ್ತಿ ಮಾರಾಟದ ಸಂಪ್ರದಾಯ ಬೆಳೆದುಬಂದಿದೆ. ವಾರದ ಕೊನೆಯ ಶನಿವಾರ ಅಮವಾಸ್ಯೆ ಬಂದ ಕಾರಣ ಸೋಮೇಶ್ವರದಲ್ಲಿ ತೀರ್ಥ ಸ್ನಾನ ಮಾಡಲು ಭಕ್ತರ ದಂಡು ಕೊಂಚ ವಿರಳವಾಗಿತ್ತು.
Thousands of people from the city and far off places undertook journey to Lord Somanatha Temple at Someshwara, Ullal here, on the holy occasion of Shravana Amavasya on Sunday September 13.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm