ಬ್ರೇಕಿಂಗ್ ನ್ಯೂಸ್
27-08-22 01:20 pm Mangalore Correspondent ಕರಾವಳಿ
ಉಳ್ಳಾಲ, ಆ.27: ಶ್ರಾವಣ ಅಮವಾಸ್ಯೆ ಪ್ರಯುಕ್ತ ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ಕಡಲಲ್ಲಿ ಸಹಸ್ರಾರು ಮಂದಿ ಭಕ್ತರು ಪವಿತ್ರ ತೀರ್ಥ ಸ್ನಾನ ಮಾಡಿ ಪುನೀತರಾದರು.
ಸೋಮೇಶ್ವರದ ಸೋಮನಾಥ ದೇವಸ್ಥಾನದ ಸಾಂಪ್ರದಾಯಿಕ ಉತ್ಸವಗಳಲ್ಲಿ ಶ್ರಾವಣ ಅಮವಾಸ್ಯೆಯ ಪವಿತ್ರ ಸಮುದ್ರ ತೀರ್ಥ ಸ್ನಾನವು ಪ್ರಾಮುಖ್ಯತೆ ಪಡೆದಿದೆ. ಮಳೆಗಾಲದಲ್ಲಿ ಪ್ರಕ್ಷುಬ್ಧಗೊಳ್ಳುವ ಕಡಲು ಶ್ರಾವಣ ಮಾಸದಲ್ಲಿ ಶಾಂತವಾಗುವುದರ ಜೊತೆಗೆ ಕಡಲ ನೀರಲ್ಲಿ ಔಷಧೀಯ ಗುಣದ ಲವಣಾಂಶಗಳು ಸಮೃದ್ಧಿಗೊಂಡಿರುತ್ತದೆ. ಈ ನೀರಲ್ಲಿ ಸ್ನಾನ ಮಾಡಿದರೆ ಚರ್ಮ ವ್ಯಾಧಿ ಮಾತ್ರವಲ್ಲದೆ ಇನ್ನಿತರ ಕಾಯಿಲೆಗಳು ದೂರವಾಗುತ್ತದೆ ಎಂಬ ನಂಬಿಕೆಯಿದೆ.



ಭಕ್ತರು ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರದ ಸಮುದ್ರದಲ್ಲಿ ಪವಿತ್ರ ತೀರ್ಥ ಸ್ನಾನವೆಂಬ ಧಾರ್ಮಿಕ ನಂಬಿಕೆ ಮತ್ತು ವೈಜ್ಞಾನಿಕ ಅರಿವಿನಿಂದ ಸ್ನಾನ ಮಾಡಿ ಪುನೀತರಾಗುತ್ತಾರೆ. ಭಕ್ತರು ವೀಳ್ಯ, ತೆಂಗಿನ ಕಾಯಿಯನ್ನು ಸಮುದ್ರರಾಜನಿಗೆ ಅರ್ಪಿಸಿ ನಂತರ ಸಮುದ್ರ ಸ್ನಾನ ಮಾಡಿ ಕಡ್ಡಾಯವಲ್ಲದಿದ್ದರೂ ಸಮೀಪದ ಗದಾ ತೀರ್ಥ ಕೆರೆಯಲ್ಲಿ ಸ್ನಾನ ಮಾಡಿ ದೇವಸ್ಥಾನಕ್ಕೆ ತೆರಳುತ್ತಾರೆ. ಸಮುದ್ರದಲ್ಲಿ ತೀರ್ಥ ಸ್ನಾನ ಮಾಡುವ ಸಂದರ್ಭ ಯಾವುದೇ ಅನಾಹುತಗಳು ನಡೆಯದಂತೆ ನುರಿತ ಜೀವರಕ್ಷಕ ಸಿಬ್ಬಂದಿಗಳು ಕಣ್ಗಾವಲು ಇಟ್ಟಿದ್ದರು. ದೇವಸ್ಥಾನಕ್ಕೆ ತೆರಳಿದ ಭಕ್ತರು ಸೋಮನಾಥನಿಗೆ ಪ್ರಿಯವಾದ ಸೇವೆಗಳನ್ನ ಸಲ್ಲಿಸಿ ಕೃತಾರ್ಥರಾದರು.


ಶ್ರಾವಣ ಅಮವಾಸ್ಯೆಯಂದು ಸೋಮೇಶ್ವರ ಕ್ಷೇತ್ರದಲ್ಲಿ ಗೃಹ ಮತ್ತು ಕೃಷಿ ಬಳಕೆಯ ವಿವಿಧ ರೀತಿಯ ಕತ್ತಿಗಳ ವ್ಯಾಪಾರ ಜೋರಾಗಿರುತ್ತದೆ. ಕೃಷಿ ಚಟುವಟಿಕೆ ಆರಂಭದ ಸಮಯವಾದುದರಿಂದ ಸಹಸ್ರಾರು ಮಂದಿ ಸೇರುವ ತೀರ್ಥ ಸ್ನಾನದ ಸಂಧರ್ಭದಲ್ಲಿ ಹಿಂದಿನಿಂದಲೂ ಇಲ್ಲಿ ಕತ್ತಿ ಮಾರಾಟದ ಸಂಪ್ರದಾಯ ಬೆಳೆದುಬಂದಿದೆ. ವಾರದ ಕೊನೆಯ ಶನಿವಾರ ಅಮವಾಸ್ಯೆ ಬಂದ ಕಾರಣ ಸೋಮೇಶ್ವರದಲ್ಲಿ ತೀರ್ಥ ಸ್ನಾನ ಮಾಡಲು ಭಕ್ತರ ದಂಡು ಕೊಂಚ ವಿರಳವಾಗಿತ್ತು.
Thousands of people from the city and far off places undertook journey to Lord Somanatha Temple at Someshwara, Ullal here, on the holy occasion of Shravana Amavasya on Sunday September 13.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm