ಬ್ರೇಕಿಂಗ್ ನ್ಯೂಸ್
01-09-22 05:26 pm Mangalore Correspondent ಕರಾವಳಿ
Photo credits : TV9 kannada
ಮಂಗಳೂರು, ಸೆ.1: ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ. ಬಂದೋಬಸ್ತ್ ಬಗ್ಗೆ ನಿಗಾ ಇಡಲು ಖುದ್ದಾಗಿ ಎಡಿಜಿಪಿ ಅಲೋಕ್ ಕುಮಾರ್ ಉಸ್ತುವಾರಿ ಹೊತ್ತುಕೊಂಡಿದ್ದಾರೆ.
ಸಮಾವೇಶ ನಡೆಯುವ ಗೋಲ್ಡ್ ಫಿಂಚ್ ಸಿಟಿ ಮೈದಾನಕ್ಕೆ ಭೇಟಿ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ವೇದಿಕೆ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಮೈದಾನದಲ್ಲಿ ಎಲ್ಲ ಕಡೆ ಸಿಸಿ ಕ್ಯಾಮೆರಾ ಅಳವಡಿಸದೇ ಇರುವುದಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಗರಂ ಆಗಿದ್ದು ಕೂಡಲೇ ಎಲ್ಲ ಕಡೆಗಳಲ್ಲಿ ಸಿಸಿ ಅಳವಡಿಸಲು ಕಾರ್ಯಕ್ರಮ ನಿರ್ವಹಣೆ ಹೊಣೆ ಹೊತ್ತುಕೊಂಡ ಕಂಪೆನಿ ಪ್ರತಿನಿಧಿಗಳಿಗೆ ತಾಕೀತು ಮಾಡಿದ್ದಾರೆ.
ಇಷ್ಟು ದೊಡ್ಡ ಮೈದಾನದಲ್ಲಿ ಕೇವಲ ಎರಡೇ ಸಿಸಿ ಕ್ಯಾಮರಾ ಹಾಕಿದ್ದೀರಿ. ಇದರಿಂದ ಏನು ಮಾಡೋಕೆ ಸಾಧ್ಯ. ತಕ್ಷಣ ಮೈದಾನದ ಎಲ್ಲಾ ಭಾಗಗಳಿಗೆ ಮತ್ತು ಎಲ್ಲ ಕೋನಗಳು ಕವರ್ ಆಗುವಂತೆ ಸಿಸಿಟಿವಿ ಕ್ಯಾಮೆರಾ ಹಾಕಬೇಕು ಎಂದು ಕಾರ್ಯಕ್ರಮ ಆಯೋಜಕ ಕಂಪೆನಿಗೆ ಸೂಚನೆ ನೀಡಿದ್ದಾರೆ. ಇದಲ್ಲದೆ, ಭದ್ರತೆಗೆ ನಿಯೋಜಿಸಿದ ಪೊಲೀಸರಿಗೂ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರು ಕೂಡ ಮೊಬೈಲ್ ನಲ್ಲಿ ಫೋಟೋ ತೆಗೆಯಬಾರದು. ನಿಮ್ಮ ಕಣ್ಣು ಮೈದಾನದಲ್ಲಿ ಸೇರಿದ ಜನರ ಮೇಲೆ ಇರಬೇಕು. ಪ್ರಧಾನಿ ಭಾಷಣ ಮಾಡುವ ಸಂದರ್ಭದಲ್ಲಿ ಭಾಷಣ ನೋಡೋದು, ಮೊಬೈಲ್ ನಲ್ಲಿ ಫೋಟೋ ತೆಗೆಯೋದು ಮಾಡಬಾರದು ಎಂದು ಹೇಳಿದ್ದಾರೆ.
ಅಲ್ಲದೆ, ಕಾರ್ಯಕ್ರಮದಲ್ಲಿ ಬಂದವರ ಜೊತೆ ಯಾವುದೇ ಕಿರಿಕ್ ಮಾಡಬಾರದು. ಗೊಂದಲ ಸೃಷ್ಠಿಯಾದರೆ ಯಾರ ಮೇಲೂ ಕೈ ಮಾಡಬಾರದು. ಅವರ ಬಾಯಿ ಮುಚ್ಚಿಸಿ ಅಲ್ಲಿಂದ ವ್ಯಾನ್ ಹತ್ತಿರ ಕರೆತರಬೇಕು. ಕಾರ್ಯಕ್ರಮಕ್ಕೆ ಬರುವವರ ಶೂ ಸಹಿತ ಸಂಪೂರ್ಣ ತಪಾಸಣೆ ಮಾಡಬೇಕು. ಕಪ್ಪು ಬಟ್ಟೆಯಾಗಲೀ, ಕಪ್ಪು ಶರ್ಟ್, ಟೀ ಶರ್ಟ್ ಧರಿಸುವುದಕ್ಕೂ ಅವಕಾಶ ಇಲ್ಲ. ಜನರಲ್ಲಿ ಮ್ಯಾಚ್ ಬಾಕ್ಸ್, ಇನ್ನಿತರ ಬೆಂಕಿ ಹೊತ್ತಿಕೊಳ್ಳಬಲ್ಲ ಯಾವುದೇ ವಸ್ತುವನ್ನೂ ತರುವುದಕ್ಕೆ ಅವಕಾಶ ಇಲ್ಲ. ಈ ಬಗ್ಗೆ ಪೊಲೀಸರು ನಿಗಾ ವಹಿಸಬೇಕಾಗುತ್ತದೆ ಎಂದು ಎಡಿಜಿಪಿ ಖಡಕ್ ಸೂಚನೆ ನೀಡಿದ್ದಾರೆ.
Adgp Alok Kumar full on rounds as Modi to arrive in Mangalore, black clothes, phones restricted. He was also angry at the police officers as no CCTV cameras were installed covering the ground.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm