ಬ್ರೇಕಿಂಗ್ ನ್ಯೂಸ್
06-10-20 08:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 6: ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೋವಿಡ್ 19 ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯದ ವೇಳೆಗೆ ತಿರುಗಾಟಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕೆಲಸಗಾರರಿದ್ದಾರೆ. ಈ ಬಾರಿ ಕೊರೊನಾದಿಂದಾಗಿ ಯಕ್ಷಗಾನ ನಡೆಯದೆ ಕಲಾವಿದರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮತ್ತೆ ತಿರುಗಾಟಕ್ಕೆ ಸಮಯ ಬಂದರೂ, ಸರಕಾರದ ಕಡೆಯಿಂದ ಸೂಚನೆ ಬಂದಿರಲಿಲ್ಲ. ಈ ನಿಟ್ಟಿನಲ್ಲಿ ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಅವಕಾಶ ನೀಡಬೇಕೆಂದು ಮುಜರಾಯಿ ಸಚಿವರಿಗೆ ಕಲಾವಿದರು ಮತ್ತು ಮೇಳದ ವ್ಯವಸ್ಥಾಪಕರು ಸೇರಿ ಮನವಿ ಸಲ್ಲಿಸಿದ್ದರು.

ಕಲಾವಿದರ ಪರವಾಗಿ ಭಾಗವತ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಉಜಿರೆ ಅಶೋಕ್ ಭಟ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಸ್ಯ ಕಲಾವಿದ ಸೀತಾರಾಮ್ ಕುಮಾರ್ ಸೇರಿದಂತೆ ಕಲಾವಿದರು ಮತ್ತು ಮೇಳದ ಪ್ರಮುಖರು ಸಚಿವರನ್ನು ಭೇಟಿಯಾಗಿದ್ದರು. ವೃತ್ತಿಪರ ಯಕ್ಷಗಾನ ಮೇಳಗಳು ನಿಂತಲ್ಲಿ ಕಲಾವಿದರ ಬದುಕು ದುಸ್ತರ ಆಗಲಿದೆ. ಈಗಾಗಲೇ ಕೋವಿಡ್ ಕಾರಣದಿಂದ ನೊಂದ ಕಲಾವಿದರ ನೆರವಿಗೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಮೇಳಗಳ ಸಹಿತ ಕಲಾವಿದರು ಮತ್ತು ವೃತ್ತಿಪರ ಮೇಳಗಳ ಸಮಸ್ಯೆಗಳನ್ನು ವಿವರಿಸಿದರು.
ಈಗಿರುವ ಮೇಳಗಳಲ್ಲಿ ಯಾವುದೇ ಆದರೂ ನಿಲುಗಡೆಯಾದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಸಂಪನ್ಮೂಲವಿರುವ ದೇವಳದ ಮೂಲಕ ಹೆಚ್ಚುವರಿ ಮೇಳಗಳನ್ನು ರಚಿಸಲು ಇಲಾಖೆ ಪರಿಶೀಲಿಸ ಬೇಕೆಂಬ ಮನವಿ ಸಭೆಯಲ್ಲಿ ಕೇಳಿಬಂತು.
ಸರ್ಕಾರದ ಪರವಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಇಂತಹ ಪರಿಸ್ಥಿತಿಯಲ್ಲಿ ಯಕ್ಷಗಾನ ಮೇಳಗಳ ಕೊನೆಯ ಕಲಾವಿದನಿಗೂ ತೊಂದರೆ ಆಗದಂತೆ ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ ಎಂದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಉಪಸ್ಥಿತರಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am