ಬ್ರೇಕಿಂಗ್ ನ್ಯೂಸ್
03-09-22 08:03 pm Mangalore Correspondent ಕರಾವಳಿ
ಉಳ್ಳಾಲ, ಆ.3: ಒಂದು ಕಾಲದಲ್ಲಿ ಹಿಂದೂ ಯುವ ಸೇನೆಯಲ್ಲಿ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದ ಜಯಂತ್ ಎಸ್. ಕುಂಪಲ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ (49) ಅವರು ಶನಿವಾರ ಅಪರಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯಂತ್ ಅವರು ಬಾಡಿಗೆ ಮನೆಯ ಒಳಗಡೆ ಹಾಲ್ ನಲ್ಲಿಯೇ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.


ಜಯಂತ್ ಅವರು ಸಕ್ರಿಯ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು ಹಣಕಾಸು ನಷ್ಟದ ಬಳಿಕ ತೊಕ್ಕೊಟ್ಟಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು. ನಿನ್ನೆ ಮಂಗಳೂರಿನ ಬಂಗ್ರ ಕೂಳೂರಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಜನರ ನಡುವೆ ತನ್ನ ಸ್ಮಾರ್ಟ್ ಫೋನನ್ನ ಕಳಕೊಂಡಿದ್ದರು. ಈ ಬಗ್ಗೆ ಇಂದು ಮಧ್ಯಾಹ್ನದ ವರೆಗೂ ಅನೇಕ ಸ್ನೇಹಿತರಲ್ಲಿ ಹೇಳಿಕೊಂಡಿದ್ದರು.

ಮೃತ ಜಯಂತ್ ಅವರು ಕುಂಪಲ, ಹನುಮಾನ್ ನಗರದ ವೀರಾಂಜನೇಯ ವ್ಯಾಯಾಮ ಶಾಲೆ ಬಳಿಯ ತನ್ನ ಜಾಗದಲ್ಲಿ ಹೊಸತಾಗಿ ಗೃಹ ನಿರ್ಮಾಣ ಮಾಡುತ್ತಿದ್ದರು. ಕಾಮಗಾರಿ ಸಂಪೂರ್ಣಗೊಳ್ಳುತ್ತಿದ್ದ ವೇಳೆಯೇ ಅವರು ಆತ್ಮಹತ್ಯೆಗೈದಿದ್ದು ಅವರ ಪತ್ನಿ , ಇಬ್ಬರು ಗಂಡು ಮಕ್ಕಳನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ.
ಉಳ್ಳಾಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Hindu yuvasena leader Jayanth Kumpala commits suicide in Ullal. He had attended Modis program held by Bjp at Gold finch city and had lost his cell phone. He was telling his friends about it but suddenly afternoon he was found hanging at his house.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm