ಬ್ರೇಕಿಂಗ್ ನ್ಯೂಸ್
04-09-22 06:07 pm Mangalore Correspondent ಕರಾವಳಿ
ಮಂಗಳೂರು, ಸೆ.4: ಪಂಚವಟಿ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ಸಾವಿರಾರು ಮಂದಿಗೆ ಮೋಸ ಎಸಗಲಾಗಿದ್ದು, ಈ ಬಗ್ಗೆ ಮಂಗಳೂರಿನ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಾಗಿಲ್ಲ. ಕೂಡಲೇ ಸೊಸೈಟಿ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪಿತರನ್ನು ಬಂಧಿಸುವಂತೆ ಆಗ್ರಹಿಸಿ ಸೆ.5ರಂದು ಬೆಳಗ್ಗೆ ಹತ್ತು ಗಂಟೆಗೆ ನಗರದ ಕ್ಲಾಕ್ ಟವರ್ ಎದುರಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಆಶ್ರಯದಲ್ಲಿ ಸಂತ್ರಸ್ತರ ಪ್ರತಿಭಟನೆ ನಡೆಯಲಿದೆ. ನೂರಾರು ಸಂತ್ರಸ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಆರ್ ಎಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಲೆಕ್ಸಾಂಡರ್ ಡಿಸೋಜ ತಿಳಿಸಿದ್ದಾರೆ. ಮಂಗಳೂರು, ಉಡುಪಿ, ಬೆಂಗಳೂರು, ತುಮಕೂರು, ಮೈಸೂರು ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಕಚೇರಿ ಹೊಂದಿದ್ದ ಪಂಚವಟಿ ಸೊಸೈಟಿಯಲ್ಲಿ ಸಾವಿರಾರು ಮಂದಿ ಕೋಟ್ಯಂತರ ರೂಪಾಯಿ ಹಣ ಹೂಡಿಕೆ ಮಾಡಿದ್ದರು. ಆದರೆ ಸೊಸೈಟಿಯವರು ದಿಢೀರ್ ಆಗಿ ಕಚೇರಿಯನ್ನು ಬಂದ್ ಮಾಡಿದ್ದು, ಭಾರೀ ಮೋಸ ಮಾಡಿದ್ದಾರೆ.

ಇದರಿಂದಾಗಿ ಆರ್ ಡಿ, ಡಿಪಾಸಿಟ್ ಎಂದು ಹಣ ಹೂಡಿಕೆ ಮಾಡಿದ್ದ ಬಡವರು ಈಗ ಬೀದಿಗೆ ಬೀಳುವಂತಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂದಾಜು ಒಂದೂವರೆ ಸಾವಿರಕ್ಕೂ ಹೆಚ್ಚು ಮಂದಿ ಹಣ ಕಳಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಸೊಸೈಟಿ ನಷ್ಟ ತೋರಿಸಿ ಕಚೇರಿ ಮುಚ್ಚಿದ್ದು, ಕಂಪನಿ ಡೈರೆಕ್ಟರ್ ಗಳು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ, ಎಫ್ಐಆರ್ ದಾಖಲಿಸದೆ ಮೀನ ಮೇಷ ಎಣಿಸುತ್ತಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿ ನಮ್ಮ ಹಣವನ್ನು ಹಿಂತಿರುಗಿಸಬೇಕು ಎಂದು ಸಂತ್ರಸ್ತರು ಒತ್ತಾಯ ಮಾಡಿದ್ದಾರೆ.
Panchawati Multistate Co Operative Credit Society cheats in crores, protest held by those who have lost their money on September 5th at Clock tower in Mangalore to take strict action against the directors and give justice to the oppressed. Recently Headline Karnataka exposed the scam of crores by Panchawathi.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm