ಬ್ರೇಕಿಂಗ್ ನ್ಯೂಸ್
05-09-22 04:26 pm Mangalore Correspondent ಕರಾವಳಿ
ಉಳ್ಳಾಲ, ಆ.5 : ಒಲ್ಲದ ವರನನ್ನ ಮನೆಯವರ ಒತ್ತಾಯಕ್ಕೆ ಮದುವೆಯಾಗಿದ್ದ ನವ ವಿವಾಹಿತ ಯುವತಿ ಹಸೆಮಣೆಯೇರಿದ 15 ದಿವಸದಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ಯುವತಿ.
ಕಳೆದ ಆಗಸ್ಟ್ 21 ರಂದು ಅಂಬ್ಲಮೊಗರಿನ ರಶ್ಮಿಯನ್ನು ಗಂಜಿಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಏಳು ತಿಂಗಳ ಹಿಂದೆ ಸಂದೀಪ್ ಮತ್ತು ರಶ್ಮಿ ವಿವಾಹ ನಿಶ್ಚಯವಾಗಿದ್ದು ರಶ್ಮಿ ಒಲ್ಲದ ಮನಸ್ಸಲ್ಲೇ ವಿವಾಹವಾಗಿದ್ದರು ಎನ್ನಲಾಗಿದೆ.

ಈ ನಡುವೆ, ಕಳೆದ ಸೆ.3 ರಂದು ಮಂಗಳೂರಿನ ಕೋಡಿಕಲ್ ನಲ್ಲಿರುವ ರಶ್ಮಿಯ ಅಕ್ಕನ ಮನೆಯಲ್ಲಿ ನವ ವಿವಾಹಿತ ಜೋಡಿಗೆ ಔತಣ ಕೂಟ ಏರ್ಪಡಿಸಿದ್ದರು. ಅಂದು ಬೆಳಗ್ಗೆ ರಶ್ಮಿ ತನ್ನ ಮನೆಯವರಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದರಂತೆ. ವಾಂತಿ ಮಾಡಿ ಅಸ್ವಸ್ಥಳಾಗಿದ್ದ ರಶ್ಮಿಯನ್ನ ಕುಟುಂಬಸ್ಥರು ದೇರಳಕಟ್ಟೆ ಖಾಸಗಿ ಅಸ್ಪತ್ರೆಗೆ ಸೇರಿಸಿದ್ದರು. ಇಂದು ಮುಂಜಾನೆ ರಶ್ಮಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಶ್ಮಿಯ ಪತಿ ಸಂದೀಪ್ ಅವರು ಮೂಲತಃ ಗಂಜಿ ಮಠದವರಾಗಿದ್ದರೂ ಅವರ ಕುಟುಂಬ ಮುಂಬೈಯಲ್ಲಿ ನೆಲೆಸಿತ್ತು. ಮದುವೆ ಆದ ಬಳಿಕ ರಶ್ಮಿ ಗಂಡನ ಜೊತೆ ಹೋಗದೇ ತವರು ಮನೆಯಲ್ಲಿಯೇ ಇದ್ದಳು ಎನ್ನಲಾಗುತ್ತಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ullal 24 year old girl commits suicide in just 24 days of her marriage in Mangalore by consuming poison. The deceased has been identified as Rashmi. She was married to Engineer husband on August 21st who was working in Dubai. She wasn't happy with her husband that's the reason she has taken this extreme step it is said.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm