ಬ್ರೇಕಿಂಗ್ ನ್ಯೂಸ್
06-09-22 11:54 am Mangalore Correspondent ಕರಾವಳಿ
ಉಳ್ಳಾಲ, ಆ.6 : ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಗೂಡು ಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವವ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ(40) ಕಣಜದ ಹುಳುವಿನ ದಾಳಿಯಿಂದ ಗಂಭೀರ ಗಾಯಗೊಂಡು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಜಿತನ್ ಅವರು ವೃತ್ತಿಪರ ತೆಂಗಿನ ಕಾಯಿ ಕೀಳುವವರಾಗಿದ್ದು ಇಂದು ಬೆಳಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನೊಣಗಳ ದಾಳಿಯ ರಭಸಕ್ಕೆ ಜಿತನ್ ಅವರು ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಪಕ್ಕದ ರಸ್ತೆಯಲ್ಲಿ ಮಗಳನ್ನ ಶಾಲಾ ವಾಹನಕ್ಕೆ ಬಿಡಲು ತೆರಳುತ್ತಿದ್ದ ಸ್ಥಳೀಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಪೂಜಾರಿ ಮತ್ತು ಅವರ ಮಗಳು ಧೃತಿ(7)ಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿವೆ.

ಪ್ರವೀಣ್ ತಲೆಗೆ ಹುಳಗಳು ಕಚ್ಚಿ ಗಾಯಗೊಳಿಸಿದ್ದು ಅವರ ಪುಟ್ಟ ಮಗಳು ಧೃತಿಗೂ ಗಾಯಗಳಾಗಿದ್ದು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಅವರು ಅಪಾಯಕಾರಿ ಕಣಜದ ಗೂಡನ್ನ ತೆರವುಗೊಳಿಸುವುದಾಗಿ ಹೇಳಿದ್ದಾರೆ.
Mangalore Blister beetle insect attack three injured in Ullal.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm