ಬ್ರೇಕಿಂಗ್ ನ್ಯೂಸ್
06-09-22 11:54 am Mangalore Correspondent ಕರಾವಳಿ
ಉಳ್ಳಾಲ, ಆ.6 : ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಗೂಡು ಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವವ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ(40) ಕಣಜದ ಹುಳುವಿನ ದಾಳಿಯಿಂದ ಗಂಭೀರ ಗಾಯಗೊಂಡು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಜಿತನ್ ಅವರು ವೃತ್ತಿಪರ ತೆಂಗಿನ ಕಾಯಿ ಕೀಳುವವರಾಗಿದ್ದು ಇಂದು ಬೆಳಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನೊಣಗಳ ದಾಳಿಯ ರಭಸಕ್ಕೆ ಜಿತನ್ ಅವರು ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಪಕ್ಕದ ರಸ್ತೆಯಲ್ಲಿ ಮಗಳನ್ನ ಶಾಲಾ ವಾಹನಕ್ಕೆ ಬಿಡಲು ತೆರಳುತ್ತಿದ್ದ ಸ್ಥಳೀಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಪೂಜಾರಿ ಮತ್ತು ಅವರ ಮಗಳು ಧೃತಿ(7)ಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿವೆ.

ಪ್ರವೀಣ್ ತಲೆಗೆ ಹುಳಗಳು ಕಚ್ಚಿ ಗಾಯಗೊಳಿಸಿದ್ದು ಅವರ ಪುಟ್ಟ ಮಗಳು ಧೃತಿಗೂ ಗಾಯಗಳಾಗಿದ್ದು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಅವರು ಅಪಾಯಕಾರಿ ಕಣಜದ ಗೂಡನ್ನ ತೆರವುಗೊಳಿಸುವುದಾಗಿ ಹೇಳಿದ್ದಾರೆ.
Mangalore Blister beetle insect attack three injured in Ullal.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm