ಬ್ರೇಕಿಂಗ್ ನ್ಯೂಸ್
07-09-22 02:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಆಚರಣೆ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಗುರು ಜಯಂತಿಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ ಸ್ವಾರ್ಥವೋ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಬಹುಸಂಖ್ಯೆಯಲ್ಲಿದ್ದು, ಕರಾವಳಿಯೆಲ್ಲೆಡೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ, ಸಂಘಗಳು ನಿರ್ಮಾಣಗೊಂಡು ಗುರುಗಳನ್ನು ದೇವರಂತೆ ಪೂಜೆ ಮಾಡಿಕೊಂಡು ಬರಲಾಗಿದೆ. ಸೆ.10ರಂದು ಎಲ್ಲ ಮಂದಿರಗಳಲ್ಲಿ ಗುರು ಜಯಂತಿಯನ್ನು ಆಚರಿಸಲು ಎಲ್ಲ ಕಡೆಯೂ ಆಮಂತ್ರಣ ಪತ್ರಿಕೆಗಳ ಹಂಚಿಕೆಯೂ ಆಗಿದೆ. ಈ ಮಧ್ಯೆ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಗುರು ಜಯಂತಿ ಆಚರಣೆಯನ್ನು ಮಂಗಳೂರಿನ ಟಿ.ಎಂ.ಎ ಪೈ ಹಾಲ್ನಲ್ಲಿ ನಡೆಸಲು ಏಕಾಏಕಿ ತೀರ್ಮಾನಿಸಿರುವುದು ಎಷ್ಟು ಸರಿ. ಈ ಮೂಲಕ ಮತ್ತೊಮ್ಮೆ ನಾರಾಯಣ ಗುರುಗಳ ಹೆಸರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಅಷ್ಟಕ್ಕೂ ಮಂಗಳೂರಿನಲ್ಲಿ ಆಚರಣೆ ಮಾಡಬೇಕಂತಿದ್ದರೆ ಮೊದಲೇ ನಿರ್ಧಾರ ಮಾಡಬೇಕಿತ್ತು. ತಿಂಗಳ ಮೊದಲೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬಹುದಿತ್ತು. ಈ ಬಾರಿ ಗೌರವಪೂರ್ವಕವಾಗಿ ವಿಧಾನಸೌಧದಲ್ಲಿ ಆಚರಣೆ ಮಾಡಿ, ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಿ. ಅದನ್ನು ಬಿಟ್ಟು ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಗುರುಗಳ ಅನುಯಾಯಿಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Mangalore Don't make political competition, using Narayan Gurus name slams Padmaraj.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm