ಬ್ರೇಕಿಂಗ್ ನ್ಯೂಸ್
07-09-22 02:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಆಚರಣೆ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಗುರು ಜಯಂತಿಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ ಸ್ವಾರ್ಥವೋ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಬಹುಸಂಖ್ಯೆಯಲ್ಲಿದ್ದು, ಕರಾವಳಿಯೆಲ್ಲೆಡೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ, ಸಂಘಗಳು ನಿರ್ಮಾಣಗೊಂಡು ಗುರುಗಳನ್ನು ದೇವರಂತೆ ಪೂಜೆ ಮಾಡಿಕೊಂಡು ಬರಲಾಗಿದೆ. ಸೆ.10ರಂದು ಎಲ್ಲ ಮಂದಿರಗಳಲ್ಲಿ ಗುರು ಜಯಂತಿಯನ್ನು ಆಚರಿಸಲು ಎಲ್ಲ ಕಡೆಯೂ ಆಮಂತ್ರಣ ಪತ್ರಿಕೆಗಳ ಹಂಚಿಕೆಯೂ ಆಗಿದೆ. ಈ ಮಧ್ಯೆ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಗುರು ಜಯಂತಿ ಆಚರಣೆಯನ್ನು ಮಂಗಳೂರಿನ ಟಿ.ಎಂ.ಎ ಪೈ ಹಾಲ್ನಲ್ಲಿ ನಡೆಸಲು ಏಕಾಏಕಿ ತೀರ್ಮಾನಿಸಿರುವುದು ಎಷ್ಟು ಸರಿ. ಈ ಮೂಲಕ ಮತ್ತೊಮ್ಮೆ ನಾರಾಯಣ ಗುರುಗಳ ಹೆಸರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಅಷ್ಟಕ್ಕೂ ಮಂಗಳೂರಿನಲ್ಲಿ ಆಚರಣೆ ಮಾಡಬೇಕಂತಿದ್ದರೆ ಮೊದಲೇ ನಿರ್ಧಾರ ಮಾಡಬೇಕಿತ್ತು. ತಿಂಗಳ ಮೊದಲೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬಹುದಿತ್ತು. ಈ ಬಾರಿ ಗೌರವಪೂರ್ವಕವಾಗಿ ವಿಧಾನಸೌಧದಲ್ಲಿ ಆಚರಣೆ ಮಾಡಿ, ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಿ. ಅದನ್ನು ಬಿಟ್ಟು ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಗುರುಗಳ ಅನುಯಾಯಿಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Mangalore Don't make political competition, using Narayan Gurus name slams Padmaraj.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am