ಬ್ರೇಕಿಂಗ್ ನ್ಯೂಸ್
07-09-22 10:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಹಸಿರು ವಲಯ ನಿರ್ಮಿಸಲು ಹಿಂದೇಟು ಹಾಕುತ್ತಿರುವ ಎಮ್ಆರ್ ಪಿಎಲ್, ಗಂಭೀರ ಪರಿಸರ ಮಾಲಿನ್ಯ ಎಸಗುತ್ತಿರುವ ಅದಾನಿ ವಿಲ್ಮಾ, ರುಚಿಗೋಲ್ಡ್, ಯುಬಿ ಬಿಯರ್ ಸಹಿತ ಬೃಹತ್ ಕೈಗಾರಿಕೆಗಳ ಮೇಲೆ ಕ್ರಮ ಕೈಗೊಳ್ಳದ ಮಾಲಿನ್ಯ ನಿಯಂತ್ರಣ ಮಂಡಳಿಯ ವಿರುದ್ಧ ನಾಗರಿಕ ಹೋರಾಟ ಸಮಿತಿ, ಜೋಕಟ್ಟೆ ವತಿಯಿಂದ ಅಣಕು ಶವಯಾತ್ರೆ, ಪ್ರತಿಕೃತಿ ದಹನ ಪ್ರತಿಭಟನೆ ಬೈಕಂಪಾಡಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂದೆ ನಡೆಯಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಪರಿಸರ ಮಾಲಿನ್ಯ ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಬೃಹತ್ ಕೈಗಾರಿಕೆಗಳ ಅಡಿಯಾಳಾಗಿ ಅಕ್ರಮಗಳನ್ನು ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ. ಇದರಿಂದಾಗಿ ಜೋಕಟ್ಟೆ, ಬಜ್ಪೆ, ಬೈಕಂಪಾಡಿ, ಸುರತ್ಕಲ್ ಮುಂತಾದ ಕೈಗಾರಿಕಾ ಬಾಹುಳ್ಯ ಪ್ರದೇಶಗಳು ಗಂಭೀರ ಕೈಗಾರಿಕಾ ಮಾಲಿನ್ಯಕ್ಕೆ ಗುರಿಯಾಗಿದ್ದು ಜನರ ಆರೋಗ್ಯಕ್ಕೆ ಕಂಟಕ ಎದುರಾಗಿದೆ ಎಂದು ಆರೋಪಿಸಿದರು.



ಸರಕಾರದ ಆದೇಶದ ಹೊರತಾಗಿಯು ಹಸಿರು ವಲಯ ನಿರ್ಮಾಣಕ್ಕಾಗಿ ಎಂ ಆರ್ ಪಿ ಎಲ್ 27 ಎಕರೆ ಭೂಸ್ವಾಧೀನಕ್ಕೆ ಸಹಕರಿಸುತ್ತಿಲ್ಲ. 33 ಶೇಕಡಾ ಜಮೀನಿನಲ್ಲಿ ಹಸಿರು ವಲಯ ನಿರ್ಮಿಸದಿರುವುದು ಕಂಪೆನಿಗೆ ಬೀಗ ಜಡಿಯುವ ಅಪರಾಧವಾದರೂ ಮಾಲಿನ್ಯ ನಿಯಂತ್ರಣ ಮಂಡಳಿ ಎಂ ಆರ್ ಪಿಎಲ್ ಅಧಿಕಾರಿಗಳಿಗೆ ವಿಧೇಯವಾಗಿ ನಡೆದುಕೊಳ್ಳುತ್ತಿದೆ. ಗೌತಮ್ ಅದಾನಿಯ ವಿಲ್ಮಾ, ಬಾಬಾ ರಾಮ್ ದೇವ್ ಒಡೆತನದ ರುಚಿಗೋಲ್ಡ್ ಮತ್ತಿತರ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬೃಹತ್ ಕಂಪೆನಿಗಳ ಮಾಲಿನ್ಯದಿಂದ ಫಲ್ಗುಣಿ ನದಿ ವಿಷಮಯ ಆಗುತ್ತಿದ್ದರೂ ಮಾಲಿನ್ಯ ನಿಯಂತ್ರಣ ಮಂಡಳಿ ಕಣ್ಣು ಮುಚ್ಚಿ ಕೂತಿದೆ. ಈ ಕುರಿತು ಹದಿನೈದು ದಿನಗಳ ಅಂತರದಲ್ಲಿ ಎರಡು ಬಾರಿ ಮಾಲಿನ್ಯ ನಿಯಂತ್ರಣ ಮಂಡಳಿ ಮುಂದೆ ಪ್ರತಿಭಟನೆ ನಡೆಸಿದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಇಂತಹ ಹೊಣೆಗೇಡಿತನದ ವಿರುದ್ದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು.




ಮಾಜಿ ಉಪಮೇಯರ್ ಪುರುಷೋತ್ತಮ ಚಿತ್ರಾಪುರ, ಡಿವೈಎಫ್ಐ ಮುಖಂಡರಾದ ಬಿ ಕೆ ಇಮ್ತಿಯಾಜ್, ಶ್ರೀನಾಥ್ ಕುಲಾಲ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಆರಂಭದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅಣಕು ಶವಯಾತ್ರೆಯನ್ನು ಬೈಕಂಪಾಡಿ ಜಂಕ್ಷನ್ ನಿಂದ ಮಾಲಿನ್ಯ ನಿಯಂತ್ರಣ ಮಂಡಳಿಯ ಕಚೇರಿ ವರಗೆ ನಡೆಸಲಾಯಿತು. ತಾಲೂಕು ಪಂಚಾಯತ್ ಮಾಜಿ ಸದಸ್ಯ ಬಿ ಎಸ್ ಬಶೀರ್, ಹೋರಾಟ ಸಮಿತಿ ಸಹ ಸಂಚಾಲಕ ಅಬೂಬಕ್ಕರ್ ಬಾವ, ಗ್ರಾಪಂ ಸದಸ್ಯೆ ಜುಬೇದಾ, ಮನೋಜ್ ಜೋಕಟ್ಟೆ, ಶ್ರೀನಿವಾಸ್, ಸುರೇಂದ್ರ ಜೋಕಟ್ಟೆ, ಶೇಖರ್ ನಿರ್ಮುಂಜೆ, ಇಕ್ಬಾಲ್ ಜೋಕಟ್ಟೆ, ಚಂದ್ರ ಶೇಖರ್, ಸಿಲ್ವಿಯಾ, ಯಮುನಾ ಕೆಂಜಾರು, ಹನೀಫ್ ಜೋಕಟ್ಟೆ, ರಾಜು ಜೋಕಟ್ಟೆ, ಲಾನ್ಸಿ ಜೋಕಟ್ಟೆ, ದೊಂಬಯ್ಯ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Protest by DYFI against MRPL over pollution of deadly chemicals in the air.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm