ಬ್ರೇಕಿಂಗ್ ನ್ಯೂಸ್
11-09-22 03:08 pm HK News Desk ಕರಾವಳಿ
ಕುಂದಾಪುರ, ಸೆ.11: ಓಣಂ ರಜೆ ಹಿನ್ನೆಲೆಯಲ್ಲಿ ಕೇರಳದಿಂದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿದ್ದಾಗ ಮುಳುಗಿದ ಮಗನ ರಕ್ಷಣೆಗೆ ಹೋಗಿ ತಾನೇ ನೀರು ಪಾಲಾದ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಕಾಚಗಡ ನಿವಾಸಿ ಚಾಂದಿನಿ ಶೇಖರ್ (42) ನೀರು ಪಾಲಾದ ಮಹಿಳೆ. ಚಾಂದಿಶೇಖರ್ ಪತಿ ಮುರುಗನ್ ಮತ್ತು ಮಕ್ಕಳೊಂದಿಗೆ ಓಣಂ ಹಬ್ಬದ ಹಿನ್ನೆಲೆಯಲ್ಲಿ ಮೂಕಾಂಬಿಕೆಯ ದರ್ಶನಕ್ಕಾಗಿ ಕೊಲ್ಲೂರಿಗೆ ಬಂದಿದ್ದರು. ಕುಟುಂಬವು ಕೊಲ್ಲೂರಿನ ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು.
ಶನಿವಾರ ಸಂಜೆ 5.15ರ ಸುಮಾರಿಗೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಗ ಆದಿತ್ಯನ್ ನದಿಯ ನೀರಿನ ಸೆಳೆತಕ್ಕೆ ಒಳಗಾಗಿದ್ದಾನೆ. ಜೊತೆಗಿದ್ದ ತಾಯಿ ಮಗನ ರಕ್ಷಣೆಗೆ ಮುಂದಾಗಿದ್ದು ನೀರಿಗೆ ಧುಮುಕಿದ್ದಾರೆ. ನಂತರ ತಂದೆ ಮುರುಗನ್ ಕೂಡ ನೀರಿಗೆ ಹಾರಿದ್ದು ಇಬ್ಬರ ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರು ಸೇರಿ ಮುರುಗನ್ ಹಾಗೂ ಮಗ ಆದಿತ್ಯನ್ ಅವರನ್ನು ರಕ್ಷಣೆ ಮಾಡಲಾಗಿದೆ. ಆದರೆ ನದಿ ನೀರಿನಲ್ಲಿ ಕೊಚ್ಚಿ ಹೋದ ಚಾಂದಿ ಶೇಖರ್ ನೀರು ಪಾಲಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿರುವ ಮಹಿಳೆಗಾಗಿ ಅಗ್ನಿಶಾಮಕ ದಳ ಹಾಗೂ ಕೊಲ್ಲೂರು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala woma drowns in the river while saving her son who was drowning in Kundapur Kollur. The deceased has been identified as Chandini Shekar (42).
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm