ಬ್ರೇಕಿಂಗ್ ನ್ಯೂಸ್
11-09-22 03:08 pm HK News Desk ಕರಾವಳಿ
ಕುಂದಾಪುರ, ಸೆ.11: ಓಣಂ ರಜೆ ಹಿನ್ನೆಲೆಯಲ್ಲಿ ಕೇರಳದಿಂದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿದ್ದಾಗ ಮುಳುಗಿದ ಮಗನ ರಕ್ಷಣೆಗೆ ಹೋಗಿ ತಾನೇ ನೀರು ಪಾಲಾದ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಕಾಚಗಡ ನಿವಾಸಿ ಚಾಂದಿನಿ ಶೇಖರ್ (42) ನೀರು ಪಾಲಾದ ಮಹಿಳೆ. ಚಾಂದಿಶೇಖರ್ ಪತಿ ಮುರುಗನ್ ಮತ್ತು ಮಕ್ಕಳೊಂದಿಗೆ ಓಣಂ ಹಬ್ಬದ ಹಿನ್ನೆಲೆಯಲ್ಲಿ ಮೂಕಾಂಬಿಕೆಯ ದರ್ಶನಕ್ಕಾಗಿ ಕೊಲ್ಲೂರಿಗೆ ಬಂದಿದ್ದರು. ಕುಟುಂಬವು ಕೊಲ್ಲೂರಿನ ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು.
ಶನಿವಾರ ಸಂಜೆ 5.15ರ ಸುಮಾರಿಗೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಗ ಆದಿತ್ಯನ್ ನದಿಯ ನೀರಿನ ಸೆಳೆತಕ್ಕೆ ಒಳಗಾಗಿದ್ದಾನೆ. ಜೊತೆಗಿದ್ದ ತಾಯಿ ಮಗನ ರಕ್ಷಣೆಗೆ ಮುಂದಾಗಿದ್ದು ನೀರಿಗೆ ಧುಮುಕಿದ್ದಾರೆ. ನಂತರ ತಂದೆ ಮುರುಗನ್ ಕೂಡ ನೀರಿಗೆ ಹಾರಿದ್ದು ಇಬ್ಬರ ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರು ಸೇರಿ ಮುರುಗನ್ ಹಾಗೂ ಮಗ ಆದಿತ್ಯನ್ ಅವರನ್ನು ರಕ್ಷಣೆ ಮಾಡಲಾಗಿದೆ. ಆದರೆ ನದಿ ನೀರಿನಲ್ಲಿ ಕೊಚ್ಚಿ ಹೋದ ಚಾಂದಿ ಶೇಖರ್ ನೀರು ಪಾಲಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿರುವ ಮಹಿಳೆಗಾಗಿ ಅಗ್ನಿಶಾಮಕ ದಳ ಹಾಗೂ ಕೊಲ್ಲೂರು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala woma drowns in the river while saving her son who was drowning in Kundapur Kollur. The deceased has been identified as Chandini Shekar (42).
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 12:12 pm
Mangalore Correspondent
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm