ಬ್ರೇಕಿಂಗ್ ನ್ಯೂಸ್
08-10-20 09:53 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್. 08 : ತುಳು ಅಕಾಡೆಮಿ ಮಾಜಿ ಸದಸ್ಯ, ಹಿರಿಯ ತುಳು ಸಾಹಿತಿ, ತುಳು ಸಂಘಟಕ ಶಿವಾನಂದ ಕರ್ಕೇರ (73) ತಮ್ಮ ಮನೆಯಲ್ಲಿ ಮಹಡಿಯಿಂದ ಜಾರಿ ಬಿದ್ದು ನಿಧನರಾಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಶಿವಾನಂದ ಕರ್ಕೇರ ಅವರು ಪಾಂಡೇಶ್ವರದ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿದ್ದು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕೆಳಗೆ ಬಿದ್ದಿದ್ದು ಹೇಗೆ ಎನ್ನುವುದು ಸರಿಯಾಗಿ ಯಾರಿಗೂ ಗೊತ್ತಿಲ್ಲ. ಅಪಾರ್ಟ್ಮೆಂಟ್ ಗೇಟ್ ಹೊರ ಭಾಗದಲ್ಲಿ ಕರ್ಕೇರ ಅವರು ಬಿದ್ದಿರುವುದನ್ನು ಪಕ್ಕದ ಮನೆಯ ಮಗುವೊಂದು ನೋಡಿ, ಹೆತ್ತವರಿಗೆ ತಿಳಿಸಿದೆ. ಕೂಡಲೇ ಅವರನ್ನು ಸ್ಥಳೀಯರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ,ಅದಾಗಲೇ ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧಿಕಾರಿಯಾಗಿದ್ದ ಕರ್ಕೇರ ಅವರು, ನಿವೃತ್ತಿ ಬಳಿಕ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ತುಳು ನಾಟಕ, ಕವನ ಬರೆಯುವ ಹವ್ಯಾಸ ಹೊಂದಿದ್ದರು. ಇವರು ಕಡಲ್ ಕವಿತಾ ಸಂಕಲನ ಮತ್ತು ಎರು ಮೈಂದೆ ನಾಟಕಗಳಿಗೆ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
ಗೋಕರ್ಣನಾಥ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು, ಯಕ್ಷಾಂಗಣದ ಸ್ಥಾಪಕ ಉಪಾಧ್ಯಕ್ಷರು ಆಗಿದ್ದರು. ಇವರು ತುಳು ಅಕಾಡೆಮಿ ಸದಸ್ಯರಾಗಿದ್ದ ಅವಧಿಯಲ್ಲಿ ತುಳು ಭಾಷೆಯಲ್ಲಿ ಮೊದಲ ಬಾರಿಗೆ ಎಂಎ ಸ್ನಾತಕೋತ್ತರ ಪದವಿ ಆರಂಭಗೊಂಡಿತ್ತು. ಮೊದಲ ಬ್ಯಾಚಿನಲ್ಲಿ ತುಳು ಎಂ.ಎ. ವಿದ್ಯಾರ್ಥಿಯಾಗಿ ಸೇರಿದ್ದಲ್ಲದೆ ತುಳು ಕಲಿಯಬೇಕೆಂಬ ನೆಲೆಯಲ್ಲಿ ಕಿರಿಯರಿಗೆ ಪ್ರೋತ್ಸಾಹ ತುಂಬುತ್ತಿದ್ದರು. ಆರೋಗ್ಯದಲ್ಲಿ ತುಂಬು ಜವ್ವನ ಹೊಂದಿದ್ದ ಕರ್ಕೇರ ಅವರು, ಹಠಾತ್ ನಿಧನರಾಗಿರುವುದು ಅವರ ಆಪ್ತರಲ್ಲಿ ಮತ್ತು ತುಳು ಸಂಘಟಕರಲ್ಲಿ ದಿಗ್ಭ್ರಮೆ ಮೂಡಿಸಿದೆ
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm