ಬ್ರೇಕಿಂಗ್ ನ್ಯೂಸ್
08-10-20 09:53 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್. 08 : ತುಳು ಅಕಾಡೆಮಿ ಮಾಜಿ ಸದಸ್ಯ, ಹಿರಿಯ ತುಳು ಸಾಹಿತಿ, ತುಳು ಸಂಘಟಕ ಶಿವಾನಂದ ಕರ್ಕೇರ (73) ತಮ್ಮ ಮನೆಯಲ್ಲಿ ಮಹಡಿಯಿಂದ ಜಾರಿ ಬಿದ್ದು ನಿಧನರಾಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಶಿವಾನಂದ ಕರ್ಕೇರ ಅವರು ಪಾಂಡೇಶ್ವರದ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿದ್ದು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕೆಳಗೆ ಬಿದ್ದಿದ್ದು ಹೇಗೆ ಎನ್ನುವುದು ಸರಿಯಾಗಿ ಯಾರಿಗೂ ಗೊತ್ತಿಲ್ಲ. ಅಪಾರ್ಟ್ಮೆಂಟ್ ಗೇಟ್ ಹೊರ ಭಾಗದಲ್ಲಿ ಕರ್ಕೇರ ಅವರು ಬಿದ್ದಿರುವುದನ್ನು ಪಕ್ಕದ ಮನೆಯ ಮಗುವೊಂದು ನೋಡಿ, ಹೆತ್ತವರಿಗೆ ತಿಳಿಸಿದೆ. ಕೂಡಲೇ ಅವರನ್ನು ಸ್ಥಳೀಯರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ,ಅದಾಗಲೇ ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧಿಕಾರಿಯಾಗಿದ್ದ ಕರ್ಕೇರ ಅವರು, ನಿವೃತ್ತಿ ಬಳಿಕ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ತುಳು ನಾಟಕ, ಕವನ ಬರೆಯುವ ಹವ್ಯಾಸ ಹೊಂದಿದ್ದರು. ಇವರು ಕಡಲ್ ಕವಿತಾ ಸಂಕಲನ ಮತ್ತು ಎರು ಮೈಂದೆ ನಾಟಕಗಳಿಗೆ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
ಗೋಕರ್ಣನಾಥ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು, ಯಕ್ಷಾಂಗಣದ ಸ್ಥಾಪಕ ಉಪಾಧ್ಯಕ್ಷರು ಆಗಿದ್ದರು. ಇವರು ತುಳು ಅಕಾಡೆಮಿ ಸದಸ್ಯರಾಗಿದ್ದ ಅವಧಿಯಲ್ಲಿ ತುಳು ಭಾಷೆಯಲ್ಲಿ ಮೊದಲ ಬಾರಿಗೆ ಎಂಎ ಸ್ನಾತಕೋತ್ತರ ಪದವಿ ಆರಂಭಗೊಂಡಿತ್ತು. ಮೊದಲ ಬ್ಯಾಚಿನಲ್ಲಿ ತುಳು ಎಂ.ಎ. ವಿದ್ಯಾರ್ಥಿಯಾಗಿ ಸೇರಿದ್ದಲ್ಲದೆ ತುಳು ಕಲಿಯಬೇಕೆಂಬ ನೆಲೆಯಲ್ಲಿ ಕಿರಿಯರಿಗೆ ಪ್ರೋತ್ಸಾಹ ತುಂಬುತ್ತಿದ್ದರು. ಆರೋಗ್ಯದಲ್ಲಿ ತುಂಬು ಜವ್ವನ ಹೊಂದಿದ್ದ ಕರ್ಕೇರ ಅವರು, ಹಠಾತ್ ನಿಧನರಾಗಿರುವುದು ಅವರ ಆಪ್ತರಲ್ಲಿ ಮತ್ತು ತುಳು ಸಂಘಟಕರಲ್ಲಿ ದಿಗ್ಭ್ರಮೆ ಮೂಡಿಸಿದೆ
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm