ಬ್ರೇಕಿಂಗ್ ನ್ಯೂಸ್
15-09-22 06:20 pm Mangalore Correspondent ಕರಾವಳಿ
ಮಂಗಳೂರು, ಸೆ.15 : ಸುರತ್ಕಲ್ ಎನ್ ಐ ಟಿ ಕೆ ಬಳಿಯಲ್ಲಿರುವ ಅಕ್ರಮ ಟೋಲ್ ಗೇಟ್ ಕಡೆಗೂ ತೆರವುಗೊಳ್ಳುವುದು ಬಹುತೇಕ ಖಚಿತ ಆಗಿದೆ. ಟೋಲ್ ತೆರವಾದರೆ ಅಲ್ಲಿ ಕೆಲಸಕ್ಕಿದ್ದ 30ರಷ್ಟು ಕಾರ್ಮಿಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಅವರ ಜೀವನ ಭದ್ರತೆಗಾಗಿ ಶಿಕ್ಷಣ, ಸಾಮರ್ಥ್ಯ ಅನುಸರಿಸಿ ಬೇರೆ ಕಡೆಗಳಲ್ಲಿ ಉದ್ಯೋಗ ದೊರಕಿಸುವ ಭರವಸೆ ನೀಡುತ್ತೇನೆ ಎಂದು ಕೆಪಿಸಿಸಿ ಸಂಯೋಜಕಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದು ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಟೋಲ್ ಗೇಟನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ನಳಿನ್ ಕುಮಾರ್ ಕಟೀಲ್ ತೆರವು ಮಾಡುವುದಾಗಿ ದಿನಾಂಕದ ಮೇಲೆ ದಿನಾಂಕ ಘೋಷಣೆ ಮಾಡಿದ್ದರೂ ಟೋಲ್ ಮುಚ್ಚಲು ಅವರಿಂದ ಸಾಧ್ಯವಾಗಿಲ್ಲ. ನೂರಾರು ಸಮಾನ ಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟಕ್ಕೆ ಸದ್ಯದಲ್ಲೇ ಗೆಲುವು ಸಿಗಲಿದೆ. ಕೆಲವೇ ಸಮಯದಲ್ಲಿ ಟೋಲ್ ಕೇಂದ್ರ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ. ಸದ್ಯ ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ ಕುಟುಂಬದ ಜೀವನ ನಿರ್ವಹಣೆ ಕಷ್ಟವಾಗಲಿದೆ. ಇದನ್ನು ಮನಗಂಡು ಅವರಿಗೆ ಮುಂದಿನ ದಿನಗಳಲ್ಲಿ ಉದ್ಯೋಗ ನೀಡುವ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಒಟ್ಟು 31 ಮಂದಿ ಕಾರ್ಮಿಕರು ದುಡಿಯುತ್ತಿದ್ದು ಅವರಲ್ಲಿ ಯುವಕ-ಯುವತಿಯರು ಸೇರಿದ್ದಾರೆ. ಟೋಲ್ ತೆರವುಗೊಳ್ಳುವುದರಿಂದ ಅವರು ಉದ್ಯೋಗ ಕಳೆದುಕೊಳ್ಳಲಿದ್ದು ಕುಟುಂಬಕ್ಕೆ ಆರ್ಥಿಕ ಹೊರೆ ಬೀಳಲಿದೆ. ಇದನ್ನು ಮನಗಂಡು ಅವರ ವಿದ್ಯಾರ್ಹತೆ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ನೀಡಲು ಈಗಾಗಲೇ ವಿವಿಧ ಕಂಪೆನಿಗಳು ಮತ್ತು ಉದ್ಯಮಿಗಳ ಜೊತೆ ಚರ್ಚಿಸಿದ್ದೇನೆ ಎಂದು ಪ್ರತಿಭಾ ಹೇಳಿದರು.
ಇದಲ್ಲದೆ, ಟೋಲ್ ಗೇಟ್ ನಲ್ಲಿ ದುಡಿಯುತ್ತಿರುವ ಕಾರ್ಮಿಕರ ಮೇಲೆ ಹತ್ತಾರು ಕ್ರಿಮಿನಲ್ ಕೇಸ್ ಗಳಿದ್ದು ಟೋಲ್ ತೆರವುಗೊಂಡ ಬಳಿಕ ಅತಂತ್ರ ಸ್ಥಿತಿ ಎದುರಿಸಲಿದ್ದಾರೆ. ಕಾರ್ಮಿಕರು ಮತ್ತವರ ಕುಟುಂಬ ಸದಸ್ಯರು ಸಂಪರ್ಕದಲ್ಲಿದ್ದು ಟೋಲ್ ತೆರವುಗೊಂಡ ತಕ್ಷಣ ಅವರ ಉದ್ಯೋಗ ಭದ್ರತೆಗೆ ಸೂಕ್ತ ಕ್ರಮ ಜರುಗಿಸುವುದಾಗಿ ಪ್ರತಿಭಾ ತಿಳಿಸಿದ್ದಾರೆ.
Surathkal toll gate closure, staff will be given new job says congress Pratibha Kulai.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 12:06 pm
HK News Desk
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
15-11-25 01:51 pm
Mangalore Correspondent
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm