ಬ್ರೇಕಿಂಗ್ ನ್ಯೂಸ್
15-09-22 06:20 pm Mangalore Correspondent ಕರಾವಳಿ
ಮಂಗಳೂರು, ಸೆ.15 : ಸುರತ್ಕಲ್ ಎನ್ ಐ ಟಿ ಕೆ ಬಳಿಯಲ್ಲಿರುವ ಅಕ್ರಮ ಟೋಲ್ ಗೇಟ್ ಕಡೆಗೂ ತೆರವುಗೊಳ್ಳುವುದು ಬಹುತೇಕ ಖಚಿತ ಆಗಿದೆ. ಟೋಲ್ ತೆರವಾದರೆ ಅಲ್ಲಿ ಕೆಲಸಕ್ಕಿದ್ದ 30ರಷ್ಟು ಕಾರ್ಮಿಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಅವರ ಜೀವನ ಭದ್ರತೆಗಾಗಿ ಶಿಕ್ಷಣ, ಸಾಮರ್ಥ್ಯ ಅನುಸರಿಸಿ ಬೇರೆ ಕಡೆಗಳಲ್ಲಿ ಉದ್ಯೋಗ ದೊರಕಿಸುವ ಭರವಸೆ ನೀಡುತ್ತೇನೆ ಎಂದು ಕೆಪಿಸಿಸಿ ಸಂಯೋಜಕಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದು ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಟೋಲ್ ಗೇಟನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ನಳಿನ್ ಕುಮಾರ್ ಕಟೀಲ್ ತೆರವು ಮಾಡುವುದಾಗಿ ದಿನಾಂಕದ ಮೇಲೆ ದಿನಾಂಕ ಘೋಷಣೆ ಮಾಡಿದ್ದರೂ ಟೋಲ್ ಮುಚ್ಚಲು ಅವರಿಂದ ಸಾಧ್ಯವಾಗಿಲ್ಲ. ನೂರಾರು ಸಮಾನ ಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟಕ್ಕೆ ಸದ್ಯದಲ್ಲೇ ಗೆಲುವು ಸಿಗಲಿದೆ. ಕೆಲವೇ ಸಮಯದಲ್ಲಿ ಟೋಲ್ ಕೇಂದ್ರ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ. ಸದ್ಯ ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ ಕುಟುಂಬದ ಜೀವನ ನಿರ್ವಹಣೆ ಕಷ್ಟವಾಗಲಿದೆ. ಇದನ್ನು ಮನಗಂಡು ಅವರಿಗೆ ಮುಂದಿನ ದಿನಗಳಲ್ಲಿ ಉದ್ಯೋಗ ನೀಡುವ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಒಟ್ಟು 31 ಮಂದಿ ಕಾರ್ಮಿಕರು ದುಡಿಯುತ್ತಿದ್ದು ಅವರಲ್ಲಿ ಯುವಕ-ಯುವತಿಯರು ಸೇರಿದ್ದಾರೆ. ಟೋಲ್ ತೆರವುಗೊಳ್ಳುವುದರಿಂದ ಅವರು ಉದ್ಯೋಗ ಕಳೆದುಕೊಳ್ಳಲಿದ್ದು ಕುಟುಂಬಕ್ಕೆ ಆರ್ಥಿಕ ಹೊರೆ ಬೀಳಲಿದೆ. ಇದನ್ನು ಮನಗಂಡು ಅವರ ವಿದ್ಯಾರ್ಹತೆ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ನೀಡಲು ಈಗಾಗಲೇ ವಿವಿಧ ಕಂಪೆನಿಗಳು ಮತ್ತು ಉದ್ಯಮಿಗಳ ಜೊತೆ ಚರ್ಚಿಸಿದ್ದೇನೆ ಎಂದು ಪ್ರತಿಭಾ ಹೇಳಿದರು.
ಇದಲ್ಲದೆ, ಟೋಲ್ ಗೇಟ್ ನಲ್ಲಿ ದುಡಿಯುತ್ತಿರುವ ಕಾರ್ಮಿಕರ ಮೇಲೆ ಹತ್ತಾರು ಕ್ರಿಮಿನಲ್ ಕೇಸ್ ಗಳಿದ್ದು ಟೋಲ್ ತೆರವುಗೊಂಡ ಬಳಿಕ ಅತಂತ್ರ ಸ್ಥಿತಿ ಎದುರಿಸಲಿದ್ದಾರೆ. ಕಾರ್ಮಿಕರು ಮತ್ತವರ ಕುಟುಂಬ ಸದಸ್ಯರು ಸಂಪರ್ಕದಲ್ಲಿದ್ದು ಟೋಲ್ ತೆರವುಗೊಂಡ ತಕ್ಷಣ ಅವರ ಉದ್ಯೋಗ ಭದ್ರತೆಗೆ ಸೂಕ್ತ ಕ್ರಮ ಜರುಗಿಸುವುದಾಗಿ ಪ್ರತಿಭಾ ತಿಳಿಸಿದ್ದಾರೆ.
Surathkal toll gate closure, staff will be given new job says congress Pratibha Kulai.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm