ಬ್ರೇಕಿಂಗ್ ನ್ಯೂಸ್
08-10-20 04:18 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 08: ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮನೀಷಾ ವಾಲ್ಮೀಕಿಗೆ ನ್ಯಾಯ ಕೊಡಲು ಅಸಮರ್ಥರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು ಖಾವಿ ಹಾಕಲು ಅಯೋಗ್ಯರಾಗಿದ್ದಾರೆ ಎಂದು ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಕಿಡಿಕಾರಿದ್ದಾರೆ.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸಮಿತಿ ಮಂಗಳೂರು ವಿದಾನಸಭಾ ಕ್ಷೇತ್ರ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರಕಾರದ ಜನವಿರೋಧಿ, ರೈತವಿರೋಧಿ ಮತ್ತು ಮಹಿಳಾ ದೌರ್ಜನ್ಯದ ವಿರುದ್ಧ ಗುರುವಾರ ತೊಕ್ಕೊಟ್ಟು ಕೇಂದ್ರ ಬಸ್ಸು ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿ ಉದ್ದೇಶಿಸಿ ಅವರು ಮಾತನಾಡಿದರು.
ಹತ್ರಾಸ್ ಅತ್ಯಾಚಾರ ಘಟನೆಯ ಕುರಿತಂತೆ ಸಂತ್ರಸ್ತೆ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ ರಾಹುಲ್ ಗಾಂಧಿ ಮೇಲೆ ಉತ್ತರ ಪ್ರದೇಶದ ಪೊಲೀಸರು ಹಲ್ಲೆಗೆ ಮುಂದಾಗಿದ್ದರು. ಹತ್ರಾಸ್ ಘಟನೆಯಲ್ಲಿ ಮಾಧ್ಯಮದ ಹಕ್ಕನ್ನು ಕಸಿಯುವ ಕಾರ್ಯವೂ ಯೋಗಿ ಸರಕಾರದಿಂದ ನಡೆದಿದೆ. ಉತ್ತರ ಪ್ರದೇಶ ಎಂಬ ರಾಜ್ಯ ಭಾರತ ದೇಶದಲ್ಲಿ ಇದೆ ಎನ್ನುವುದಕ್ಕೆ ನಾಚಿಕೆ ಪಡುವ ಸ್ಥಿತಿ ಎದುರಾಗಿದ್ದು, ಯೋಗಿ ಆದಿತ್ಯನಾಥ್ ಮಂಗಳೂರಿಗೆ ಕಾಲಿಟ್ಟರೆ ಅವರಿಗೆ ಕಪ್ಪು ಮಸಿ ಬಳಿಯುವ ಕಾರ್ಯ ಯೂತ್ ಕಾಂಗ್ರೆಸ್ ನಡೆಸುತ್ತೆ ಎಂದು ಎಚ್ಚರಿಸಿದರು.
ಇಷ್ಟೆಲ್ಲ ಆದರೂ ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ. ಸರ್ವಾಧಿಕಾರಿ ಧೋರಣೆಗೆ ಜೀವಂತ ಉದಾಹರಣೆ ಮೋದಿ. ಹಿಟ್ಲರ್ ನಂತರ ನಮ್ಮ ದೇಶದ ಮೋದಿ ಸರ್ವಾಧಿಕಾರಿ ಆಗಿದ್ದಾರೆ. ಇಂದಿರಾ ಗಾಂಧಿಯವರು ಉಳುವವನೇ ಒಡೆಯನೆಂಬ ಕಾನೂನು ಜಾರಿ ಮಾಡಿದರೆ, ಉಳ್ಳವನೇ ಭೂಮಿಯ ಒಡೆಯ ಎಂಬ ನೀತಿ ಜಾರಿ ಮಾಡಿ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಕೇಂದ್ರ ಸರಕಾರ ನಡೆಸುತ್ತಿದೆ ಎಂದು ಆರೋಪಿಸಿದರು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮಾತನಾಡಿ ಹತ್ರಾಸ್ ಅತ್ಯಾಚಾರ ಘಟನೆಯನ್ನು ಕಂಡ ದೇಶದ ಮಹಿಳೆಯರು ಕಣ್ಣಿಗೆ ಬಟ್ಟೆ ಕಟ್ಟಿ ಕುಳಿತಿದ್ದಾರೆ. ಅತ್ಯಾಚಾರಿಗಳ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಬೇಕು. ಅತ್ಯಾಚಾರಿಗಳನ್ನು ಸಾರ್ವಜನಿಕ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.
ಇಂಟಕ್ ರಾಷ್ಟ್ರೀಯ ಪ್ರ.ಕಾ. ರಾಕೇಶ್ ಮಲ್ಲಿ, ಮುಖಂಡರಾದ ದಿನಕರ್ ಶೆಟ್ಟಿ, ಮನೋಹರ್ ಶೆಟ್ಟಿ,ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಹಿಮಾನ್ ಕೋಡಿಜಾಲ್, ತಾ.ಪಂ ಅಧ್ಯಕ್ಷ ಮಹಮ್ಮದ್ ಮೋನು, ಮುಖಂಡರಾದ ಎನ್.ಎಸ್ ಕರೀಂ, ಮಹಮ್ಮದ್ ಮುಸ್ತಾಫ ಹರೇಕಳ,ಪದ್ಮನಾಭ ನರಿಂಗಾನ, ತಾ.ಪಂ ಸದಸ್ಯೆ ಸುರೇಖ ಚಂದ್ರಹಾಸ್ ,ಮಾಜಿ ಉಳ್ಳಾಲ ನಗರ ಸದಸ್ಯ ದಿನೇಶ್ ರೈ ಮೊದಲಾದವರು ಇದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am