ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm