ಬ್ರೇಕಿಂಗ್ ನ್ಯೂಸ್
19-09-22 10:13 pm Mangalore Correspondent ಕರಾವಳಿ
ಪುತ್ತೂರು, ಸೆ.19 : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಚಲನ ಎಬ್ಬಿಸಿದ ಸಂದರ್ಭದಲ್ಲಿ ಬೆಳ್ಳಾರೆಗೆ ಹೊರಟಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸ್ಥಳಕ್ಕೆ ಬರಲು ಮುಂದಾಗಿದ್ದರು. ಆದರೆ ಶಾಂತಿ ಕದಡುವ ನೆಪದಲ್ಲಿ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಿರ್ಬಂಧ ತೆರವಾಗುತ್ತಿದ್ದಂತೆ ಸೋಮವಾರ ಮುತಾಲಿಕ್ ಪ್ರವೀಣ್ ಮನೆಗೆ ಭೇಟಿಯಿತ್ತು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಇದೇ ವೇಳೆ, ಮಾಧ್ಯಮಕ್ಕೆ ಮಾತನಾಡಿದ ಮುತಾಲಿಕ್ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬಂಧಿತರಿಗೆ ಗಲ್ಲು ಶಿಕ್ಷೆ ನೀಡಬೇಕು. ಒಂದು ವರ್ಷದೊಳಗೆ ಕೊಲೆಗಡುಕರನ್ನು ನೇಣಿಗೆ ಹಾಕಬೇಕು. ಇದೇ ರಾಜ್ಯ ಸರಕಾರ ಪ್ರವೀಣ್ ನೆಟ್ಟಾರು ಅವರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ. ಎನ್ಐಎ ಇನ್ನೊಂದು ತನಿಖೆ ಮಾಡಿದ ಮಾತ್ರಕ್ಕೆ ನ್ಯಾಯ ಸಿಗುವುದಿಲ್ಲ. ಪ್ರವೀಣ್ ನೆಟ್ಟಾರ್ ಕೊಲೆಗಡುಕರಿಗೆ ಗಲ್ಲು ಶಿಕ್ಷೆ ಆಗುವ ವರೆಗೂ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.


ಮೃತ ಪ್ರವೀಣ್ ನೆಟ್ಟಾರ್ ಕುಟುಂಬಕ್ಕೆ ಸರಕಾರ ನೀಡಿದ ಭರವಸೆ ಈಡೇರಿಸಬೇಕು. ಪ್ರವೀಣ್ ಪತ್ನಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ ನೀಡುವ ಭರವಸೆ ಮುಖ್ಯಮಂತ್ರಿ ನೀಡಿದ್ದಾರೆ. ಕೂಡಲೇ ಭರವಸೆಯಂತೆ ಆದೇಶ ಹೊರಡಿಸಬೇಕು. ಆಶ್ವಾಸನೆ ಈಡೇರಿಸದಿದ್ದರೆ ಸಿಎಂ ಮನೆ ಮುಂದೆ ಧರಣಿ ನಡೆಸುತ್ತೇವೆ. ಮಾತು ತಪ್ಪಿದರೆ ಸಿಎಂ ಮುಖಕ್ಕೆ ಮಸಿ ಬಳಿಯುವುದಕ್ಕೂ ಹೇಸುವುದಿಲ್ಲ ಎಂದು ಮುತಾಲಿಕ್ ಎಚ್ಚರಿಸಿದರು.

ಪ್ರವೀಣ್ ಹತ್ಯೆ ಹೆಣ್ಣು, ಹೊನ್ನು ಅಥವಾ ಇನ್ನಾವುದೇ ದ್ವೇಷಕ್ಕಾಗಿ ನಡೆದಿಲ್ಲ. ಹಿಂದುತ್ವದ ಪರ ಇದ್ದಾನೆ, ಸಮಾಜದಲ್ಲಿ ಸಂಘಟನೆ ನಡೆಸುತ್ತಾನೆ ಎಂಬ ಕಾರಣಕ್ಕೆ ಟಾರ್ಗೆಟ್ ಮಾಡಿ ಕೊಂದಿದ್ದಾರೆ. ಇಂಥ ಇಸ್ಲಾಮಿಕ್ ಗೂಂಡಾಗಳನ್ನು ಭಾರತ ನೆಲದ ಮೇಲಿರಲು ಅವಕಾಶ ನೀಡಬಾರದು. ಇಂತಹ ರಾಕ್ಷಸರ ಕುಲವನ್ನು ಸರ್ವನಾಶ ಮಾಡುವವರೆಗೂ ಬಿಡುವುದಿಲ್ಲ. ಇವರ ಇಂಥ ಮಾನಸಿಕತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತೇವೆ. ಹಿಂದು ಸಮಾಜ ಈಗ ಜಾಗೃತವಾಗಿದೆ. ಇಂಥ ಕೃತ್ಯಕ್ಕೆ ಸೂಕ್ತ ಉತ್ತರ ನೀಡುತ್ತದೆ ಎಂದರು.

ಪ್ರವೀಣ್ ನೆಟ್ಟಾರು ಪ್ರಕರಣದ ಕೊಲೆಗಡುಕರಿಗೆ ಜಾಮೀನು ನೀಡಬಾರದು. ಅವರಿಗೆ ಜಾಮೀನು ಕೊಟ್ಟರೆ ಹಿಂದು ಸಮಾಜ ಹಾಗೇ ಬಿಡುವುದಿಲ್ಲ. ಕೊಲೆ ಗಡುಕರಿಗೆ ಯಾವುದೇ ಪರಿಸ್ಥಿತಿಯಲ್ಲಿ ಜಾಮೀನು ಆಗದಂತೆ ಸರಕಾರ ಜವಾಬ್ದಾರಿ ವಹಿಸಬೇಕು. ಇಂಥ ವಿಚಾರದಲ್ಲಿ ರಾಜಕೀಯ ಮಾಡಬೇಡಿ. ನಮಗೆ ಎನ್ಐಎ ತನಿಖೆಯ ಮೇಲೆ ಭರವಸೆ ಇಲ್ಲ. ಹಿಂದೆ ಎನ್ಐಎ ನಡೆಸಿದ ತನಿಖೆಯಿಂದ ಏನೂ ಆಗಿಲ್ಲ. ಕೂಡಲೇ ಹಂತಕರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಿ ಎಂದು ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಹೇಳಿದರು.
If Praveen Nettaru doesn't get job in CMs office throw ink on Bommais face says Pramod Muthalik.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm