ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm