ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm