ಬ್ರೇಕಿಂಗ್ ನ್ಯೂಸ್
26-09-22 11:33 am Mangalore Correspondent ಕರಾವಳಿ
ಉಳ್ಳಾಲ, ಸೆ.26: ಸೆಪ್ಟೆಂಬರ್ ಒಂದೇ ತಿಂಗಳಲ್ಲಿ ಕುಂಪಲದ ಮೂರು ರಿಕ್ಷಾ ಚಾಲಕರು ಅಕಾಲಿಕ ಸಾವನ್ನಪ್ಪಿದ್ದು, ಸರಣಿ ಸಾವಿನಿಂದಾಗಿ ಮತ್ತೆ ಕುಂಪಲ ಪ್ರದೇಶದ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.
ನಿನ್ನೆ ರಾತ್ರಿ ಕುಂಪಲ ಮೂರುಕಟ್ಟೆ ನಿವಾಸಿ ಆಟೋ ಚಾಲಕ ಜಯಪ್ರಕಾಶ್(42) ಯಾನೆ ಬಾಚ ಅವರು ಅಲ್ಪ ಕಾಲದ ಅಸೌಖ್ಯದಿಂದ ಸಾವನ್ನಪ್ಪಿದ್ದಾರೆ. ಲಿವರ್ ಸಂಬಂಧಿ ಕಾಯಿಲೆಯಿಂದ ಗಂಭೀರ ಸ್ಥಿತಿಗೆ ತಲುಪಿದ್ದ ಜಯಪ್ರಕಾಶ್ ಅವರನ್ನು ಶುಕ್ರವಾರ ಆಸ್ಪತ್ರೆಗೆ ಸೇರಿಸಲಾಗಿದ್ದು ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತ ಜಯಪ್ರಕಾಶ್ ಹಿಂದು ಜಾಗರಣ ವೇದಿಕೆಯ ಪ್ರಮುಖರಾದ ವಿಜಯ್ ಪ್ರಕಾಶ್ (ಪಕ್ಕು) ಅವರ ಅವಳಿ ಸಹೋದರನಾಗಿದ್ದರು. ಅವರು ತಂದೆ, ತಾಯಿ ಸಹೋದರರು, ಪತ್ನಿ , ಮಗಳನ್ನ ಅಗಲಿದ್ದಾರೆ.
ಸೆ.3ರಂದು ಕುಂಪಲ ಕೃಷ್ಣ ನಗರ ನಿವಾಸಿ ಹಿಂದೂ ಯುವ ಸೇನೆಯ ಪ್ರಮುಖರಾದ ಜಯಂತ್ ಎಸ್ ಕುಂಪಲ(48) ಅವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಸೆ.13ರಂದು ಕುಂಪಲ, ಬಲ್ಯ ನಿವಾಸಿ ಧನಂಜಯ ರಾವ್ (53) ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗೆ ಅಕಾಲಿಕವಾಗಿ ಸಾವನ್ನಪ್ಪಿದ ಮೂವರು ಕೂಡ ಆಟೋ ಚಲಾಯಿಸಿ ಕುಟುಂಬವನ್ನ ಸಾಕುತ್ತಿದ್ದರಲ್ಲದೆ ಸಂಘ, ಸಂಸ್ಥೆಗಳಲ್ಲಿ ಗುರುತಿಸಿ ಜನಾನುರಾಗಿಯಾಗಿದ್ದರು.
ವರ್ಷದ ಹಿಂದೆ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಾ ಸಾವಿನ ಬಳಿಕ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸಿದ್ದವು. ಇದೀಗ ಒಂದೇ ತಿಂಗಳಲ್ಲಿ ಮೂರು ಆಟೋ ಚಾಲಕರು ಅಕಾಲಿಕ ಸಾವನ್ನಪ್ಪಿರುವುದು ಕುಂಪಲದಲ್ಲಿ ಸರಣಿ ಸಾವಿನ ಬಗ್ಗೆ ಆತಂಕ ಮೂಡಿಸಿದ್ದು ಜನರನ್ನು ಗಢ ಗಢ ನಲುಗಿಸಿದೆ.
Mangalore Three auto drivers die in span of just one month in Kumpala.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm