ಬ್ರೇಕಿಂಗ್ ನ್ಯೂಸ್
27-09-22 11:11 am Mangalore Correspondent ಕರಾವಳಿ
ಮಂಗಳೂರು, ಸೆ.27 : ರಾಜ್ಯದಲ್ಲಿ ಪಿಎಫ್ಐ ಕಾರ್ಯಕರ್ತರ ಮೇಲೆ ಕಾರ್ಯಾಚರಣೆ ಮುಂದುವರಿದಿದ್ದು ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.
ಹತ್ತಕ್ಕೂ ಹೆಚ್ಚು ಪಿ ಎಫ್ ಐ ಮುಖಂಡರನ್ನು ವಶಕ್ಕೆ ಪಡೆದ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ದೃಢಪಡಿಸಿದ್ದಾರೆ. ಮಾಹಿತಿ ಪ್ರಕಾರ, ಇಸ್ಮಾಯಿಲ್ ಇಂಜಿನಿಯರ್, ನಜೀರ್, ಇಬ್ರಾಹಿಂ ಪುತ್ತಿಗೆ, ಮುಜಾವರ್, ಮಹಮ್ಮದ್ ನೌಫಾಲ್, ಫಿರೋಸ್ ಖಾನ್ , ಇಬ್ರಾಹಿಂ ಉಳಾಯಿಬೆಟ್ಟು ಸೇರಿ 10 ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.


ಸಿ ಆರ್ ಪಿ ಸಿ 107 ಮತ್ತು 151 ಸೆಕ್ಷನ್ ಅಡಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎನ್ನುವ ಮಾಹಿತಿಗಳಿದ್ದು ಬಂಧಿತರನ್ನು ಮಂಗಳೂರಿನ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಏಳು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅವರನ್ನು ಬಳಿಕ ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿದೆ.

ಇತ್ತೀಚೆಗೆ ದೇಶಾದ್ಯಂತ ಪಿಎಫ್ಐ ಗುರಿಯಾಗಿಸಿ ಪೊಲೀಸರು ಮತ್ತು ಎನ್ಐಎ ದಾಳಿ ನಡೆಸಿ ನೂರಕ್ಕೂ ಹೆಚ್ಚು ಪ್ರಮುಖ ನಾಯಕರನ್ನು ಬಂಧಿಸಿದ್ದರು. ಈಗ ಎರಡನೇ ಹಂತದ ನಾಯಕರನ್ನು ವಶಕ್ಕೆ ಪಡೆಯಲಾಗಿದ್ದು ಬಹುತೇಕ ಪಿಎಫ್ಐ ಸಂಘಟನೆಯನ್ನು ನಿಷೇಧಿಸಲು ಸರಕಾರ ಯೋಜನೆ ಹಾಕ್ಕೊಂಡಿದೆ ಎನ್ನಲಾಗುತ್ತಿದೆ. ಅದಕ್ಕಾಗಿ ಗಲಭೆ, ಗಲಾಟೆ ನಡೆಸಬಾರದು ಎನ್ನುವ ಉದ್ದೇಶದಿಂದ ಪಿಎಫ್ಐನಲ್ಲಿ ಗುರುತಿಸಿಕೊಂಡಿರುವ ನಾಯಕರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗುತ್ತಿದೆ.
Police detained Popular Front of India (PFI) leaders in Mangaluru and Udupi on Tuesday September 27. Police detained PFI leaders from Ullal, Mangaluru, Talapady and district limits. Preventive Detention cases were filed under 107, 151 Crpc against the detained leaders. Ismail Engineer Bajpe, Sharif Pandeshwar, Iqbal Kettikal and Naushad Surathkal are among the detained.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm