ಬ್ರೇಕಿಂಗ್ ನ್ಯೂಸ್
28-09-22 03:45 pm Mangalore Correspondent ಕರಾವಳಿ
ಉಳ್ಳಾಲ, ಸೆ.28 : ಸರಕಾರಿ ಪ್ರಾಯೋಜಕತ್ವದಲ್ಲಿ ನಡೆದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಶಾಸಕ ಯುಟಿ ಖಾದರ್ ಪಕ್ಕದಲ್ಲಿ ಸ್ಥಳೀಯ ಮಹಿಳೆಯೊಬ್ಬರ ಭಾವಚಿತ್ರ ಇರುವ ಫ್ಲೆಕ್ಸ್ ಅಳವಡಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಆಯೋಜಕರು ತಕ್ಷಣ ವಿವಾದಿತ ಫ್ಲೆಕ್ಸನ್ನ ತೆರವುಗೊಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಕಾರ್ಯಕ್ರಮದ ಅಂಗವಾಗಿ ಕೊಲ್ಯದ ನಾರಾಯಣ ಗುರು ಸಭಾಂಗಣದಲ್ಲಿ ಅನ್ನಪ್ರಾಶನ, ಪೌಷ್ಟಿಕ ಆಹಾರ, ಶಿಶು ಪ್ರದರ್ಶನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನ ಬುಧವಾರ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಪ್ರಚಾರಾರ್ಥ ಸಭಾಂಗಣದ ಹೊರಗಡೆ ಹಾಕಿರುವ ಫ್ಲೆಕ್ಸಲ್ಲಿ ಉಳ್ಳಾಲ ಶಾಸಕ ಯು.ಟಿ ಖಾದರ್ ಮತ್ತು ಅವರ ಪಕ್ಕದಲ್ಲಿ ಸ್ಥಳೀಯ ಹಿಂದು ಗರ್ಭಿಣಿ ಮಹಿಳೆಯೋರ್ವರ ಭಾವಚಿತ್ರಗಳನ್ನ ಹಾಕಲಾಗಿತ್ತು. ಕಾರ್ಯಕ್ರಮದ ಆಯೋಜಕರು ಫ್ಲೆಕ್ಸಲ್ಲಿ ಸ್ಥಳೀಯ ಹಿಂದೂ ಕಾರ್ಯಕರ್ತನ ಸಹೋದರಿ ಗರ್ಭಿಣಿಯಾಗಿದ್ದ ವೇಳೆ ತೆಗೆಸಿದ್ದ ಭಾವಚಿತ್ರವನ್ನ ಅನುಮತಿ ಇಲ್ಲದೆ ಜಾಲತಾಣದಿಂದ ನಕಲು ಮಾಡಿ ಮುದ್ರಿಸಿದ್ದರು. ಇದರ ವಿರುದ್ಧ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೀಮಂತ ಕಾರ್ಯಕ್ರಮದ ಸಭಾಂಗಣಕ್ಕೆ ನುಗ್ಗಿದ ಬಜರಂಗದಳ ಕಾರ್ಯಕರ್ತರು ಹಿಂದು ವಿರೋಧಿ ಖಾದರ್ ಎಂದು ಧಿಕ್ಕಾರ ಕೂಗಿದ್ದಾರೆ. ಹಿಂದು ಕಾರ್ಯಕರ್ತರ ಆಕ್ರೋಶಕ್ಕೆ ಮಣಿದ ಕಾರ್ಯಕ್ರಮದ ಆಯೋಜಕರು ಕೂಡಲೇ ಫ್ಲೆಕ್ಸನ್ನ ತೆರವುಗೊಳಿಸಿದ್ದಾರೆ.
ಬಜರಂಗದಳದ ಪ್ರಮುಖರಾದ ಅರ್ಜುನ್ ಮಾಡೂರು ಮಾತನಾಡಿ ತಾಯಂದಿರಿಗೆ ಸ್ಥೈರ್ಯ ನೀಡುವ ಕಾರ್ಯಕ್ರಮ ಎಂದು ಹೇಳಿಕೊಂಡು ಅನುಮತಿ ಇಲ್ಲದೆ ಯಾವುದೋ ಹಿಂದೂ ಹುಡುಗಿಯ ಫೋಟೊವನ್ನ ಸಾರ್ವಜನಿಕವಾಗಿ ಫ್ಲೆಕ್ಸ್ ಹಾಕಿ ಆಕೆ ಮುಜುಗರ ಪಡುವಂತೆ ಮಾಡಿದನ್ನ ಬಜರಂಗದಳ ಖಂಡಿಸುತ್ತಿದ್ದು ಕಾರ್ಯಕ್ರಮ ಆಯೋಜಕರ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡುವುದಾಗಿ ಹೇಳಿದರು.ಆಯೋಜಕರು ಮಾಡಿದ ಎಡವಟ್ಟಿನಿಂದ ಸರಕಾರಿ ಪ್ರಾಯೋಜಕತ್ವದಲ್ಲಿ ನಡೆದ ಸಾಮೂಹಿಕ ಸೀಮಂತ ಕಾರ್ಯಕ್ರಮದಲ್ಲಿ ಗೊಂದಲ ನಡೆಯುವಂತಾಯಿತು.
Mangalore, Pregnant photo of woman used on government banner at Ullal without permission along with MLA UT Khader sparks controversy.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm