ಬ್ರೇಕಿಂಗ್ ನ್ಯೂಸ್
28-09-22 08:04 pm Mangalore Correspondent ಕರಾವಳಿ
ಉಳ್ಳಾಲ, ಸೆ.28 : ಚುನಾವಣೆಯಲ್ಲಿ ಇಪ್ಪತ್ತು, ಮೂವತ್ತು ಸಾವಿರ ಮತಗಳ ಅಂತರದಲ್ಲಿ ಗೆದ್ದವನಿಗೆ ಸಾಮೂಹಿಕ ಸೀಮಂತದಲ್ಲಿ ರಾಜಕೀಯ ಲಾಭ ಪಡೆಯುವ ಅಗತ್ಯತೆ ಇಲ್ಲ. ನಾಲ್ಕು ಜನ ಬಂದು ಬೊಬ್ಬೆ ಹೊಡೆದರೆ ಇಂತಹ ಮಾದರಿ ಕಾರ್ಯಕ್ರಮದ ಬಗ್ಗೆ ಊರಿಗೆ ಢಂಗುರ ಬಾರಿಸಿದಂತಾಯ್ತು. ಅವರಿಗೆ ನನ್ನ ಅಭಿನಂದನೆ ಎಂದು ಬಜರಂಗದಳದ ಕಾರ್ಯಕರ್ತರಿಗೆ ಶಾಸಕ ಯು.ಟಿ ಖಾದರ್ ಟಾಂಗ್ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಪ್ರಯುಕ್ತ ಬುಧವಾರ ಕೊಲ್ಯದ ನಾರಾಯಣಗುರು ಸಭಾಭವನದಲ್ಲಿ ನಡೆದ ಅನ್ನಪ್ರಾಶನ, ಪೌಷ್ಟಿಕ ಆಹಾರ ,ಶಿಶು ಪ್ರದರ್ಶನ ಹಾಗೂ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.


ಕಾರ್ಯಕ್ರಮ ಆರಂಭಕ್ಕೂ ಮೊದಲು ಸಭಾಂಗಣದ ಹೊರಗೆ ಹಾಕಲಾಗಿದ್ದ ಫ್ಲೆಕ್ಸ್ ವಿಚಾರದಲ್ಲಿ ಬಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಫ್ಲೆಕ್ಸಲ್ಲಿ ಉಳ್ಳಾಲ ಶಾಸಕ ಯು.ಟಿ ಖಾದರ್ ಮತ್ತು ಅವರ ಪಕ್ಕದಲ್ಲಿ ಸ್ಥಳೀಯ ಹಿಂದು ಗರ್ಭಿಣಿ ಮಹಿಳೆಯೋರ್ವರ ಭಾವಚಿತ್ರ ಹಾಕಲಾಗಿತ್ತು. ಕಾರ್ಯಕ್ರಮದ ಆಯೋಜಕರು ಫ್ಲೆಕ್ಸ್ ನಲ್ಲಿ ಸ್ಥಳೀಯ ಹಿಂದು ಕಾರ್ಯಕರ್ತನ ಸಹೋದರಿ ಗರ್ಭಿಣಿಯಾಗಿದ್ದ ಭಾವಚಿತ್ರವನ್ನ ಅನುಮತಿ ಇಲ್ಲದೆ ಜಾಲತಾಣದಿಂದ ನಕಲು ಮಾಡಿ ಮುದ್ರಿಸಿದ್ದರು. ಇದರ ವಿರುದ್ಧ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಪರಿಣಾಮ ಕಾರ್ಯಕ್ರಮ ಆಯೋಜಕರು ಫ್ಲೆಕ್ಸನ್ನ ತೆರವುಗೊಳಿಸಿದ್ದರು.


ಸಾಮೂಹಿಕ ಸೀಮಂತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಖಾದರ್, ಗರ್ಭಿಣಿಯರಿಗೆ ಅಗತ್ಯ ಉಳ್ಳ ಅರ್ಥಪೂರ್ಣ ಕಾರ್ಯಕ್ರಮವನ್ನ ಆಯೋಜಿಸಲಾಗಿದೆ. ಸೇರಿರುವ ಗರ್ಭಿಣಿಯರನ್ನ ಉದ್ದೇಶಿಸಿ ಮಾತನಾಡಿದ ಅವರು ಟೆನ್ಷನ್ ರಹಿತ ಆರೋಗ್ಯವಂತ ಮಗು ಮತ್ತು ತಾಯಂದಿರು ಸಮಾಜದಲ್ಲಿ ರೂಪುಗೊಳ್ಳಲಿ ಎಂದು ಹಾರೈಸಿದರು.
ಶಾಸಕ ಖಾದರ್ ಅವರು ಮಕ್ಕಳಿಗೆ ಅನ್ನಪ್ರಾಶನ ನಡೆಸಿದರು. ಸುಮಂಗಲೆಯರಿಂದ ಗರ್ಭಿಣಿಯರಿಗೆ ಬಾಗಿನ, ಫಲ, ಪುಷ್ಪ, ಉಡುಗೊರೆ, ಆರತಿ ಎತ್ತಿ ಸಾಮೂಹಿಕ ಸೀಮಂತ ನಡೆಸಲಾಯಿತು.
Banner of a pregnant woman without permission at Ullal, UT Khader slams Bajarangdal members.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm