ಬ್ರೇಕಿಂಗ್ ನ್ಯೂಸ್
29-09-22 09:27 pm Mangalore Correspondent ಕರಾವಳಿ
ಮಂಗಳೂರು, ಸೆ.29: ಇತ್ತೀಚೆಗೆ ಕೊಲೆಯಾದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಕಚೇರಿಯಿಂದ ಆದೇಶ ಮಾಡಲಾಗಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇದೀಗ ಸರಕಾರಿ ಆದೇಶ ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಸೆ.27ರಿಂದಲೇ ನೇಮಕ ಮಾಡಿಕೊಳ್ಳುವಂತೆ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಆರ್ ಶಿವಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.

ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ಸೇವಾ ಅಧಿನಿಯಮದ ಪ್ರಕಾರ ನೇಮಿಸಿಕೊಳ್ಳಲು ಆದೇಶ ಮಾಡಿದ್ದು, ಹುದ್ದೆಗೆ ತಿಂಗಳ ವೇತನ 30,350 ರೂ. ಆಗಿರುತ್ತದೆ. ಎರಡು ತಿಂಗಳ ಒಳಗಾಗಿ ಶೈಕ್ಷಣಿಕ ದಾಖಲಾತಿಗಳನ್ನು ಸಂಬಂಧಪಟ್ಟ ಮಂಡಳಿಗೆ ನೀಡಬೇಕಾಗಿರುತ್ತದೆ. ಆದರೆ ಈ ಹುದ್ದೆಯು ಗುತ್ತಿಗೆ ಆಧಾರದಲ್ಲಿ ಇರಲಿದ್ದು, ಹಾಲಿ ಮುಖ್ಯಮಂತ್ರಿಯವರ ಪದಾವಧಿಯ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಹಿರಿಯ ಸಹಾಯಕ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಇದೀಗ ಬೇರೊಬ್ಬ ವ್ಯಕ್ತಿಯನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಖಾಲಿಯಾದ ಹುದ್ದೆಗೆ ಪ್ರವೀಣ್ ಪತ್ನಿಯನ್ನು ನೇಮಕ ಮಾಡಿಕೊಳ್ಳಲು ಆದೇಶ ಮಾಡಲಾಗಿದೆ.
Praveen bellare murder case, wide given temporary job at CM Bommais office in Bangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm