ಬ್ರೇಕಿಂಗ್ ನ್ಯೂಸ್
29-09-22 09:27 pm Mangalore Correspondent ಕರಾವಳಿ
ಮಂಗಳೂರು, ಸೆ.29: ಇತ್ತೀಚೆಗೆ ಕೊಲೆಯಾದ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಹಿರಿಯ ಸಹಾಯಕಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಮುಖ್ಯಮಂತ್ರಿ ಕಚೇರಿಯಿಂದ ಆದೇಶ ಮಾಡಲಾಗಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರವೀಣ್ ನೆಟ್ಟಾರು ಅವರ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಸರಕಾರಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಅದರಂತೆ, ಇದೀಗ ಸರಕಾರಿ ಆದೇಶ ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಸೆ.27ರಿಂದಲೇ ನೇಮಕ ಮಾಡಿಕೊಳ್ಳುವಂತೆ ಸರಕಾರದ ಅಧೀನ ಕಾರ್ಯದರ್ಶಿ ಎಸ್.ಆರ್ ಶಿವಶಂಕರ್ ಆದೇಶದಲ್ಲಿ ತಿಳಿಸಿದ್ದಾರೆ.

ಗ್ರೂಪ್ ಸಿ ಹುದ್ದೆಗೆ ಕರ್ನಾಟಕ ಸೇವಾ ಅಧಿನಿಯಮದ ಪ್ರಕಾರ ನೇಮಿಸಿಕೊಳ್ಳಲು ಆದೇಶ ಮಾಡಿದ್ದು, ಹುದ್ದೆಗೆ ತಿಂಗಳ ವೇತನ 30,350 ರೂ. ಆಗಿರುತ್ತದೆ. ಎರಡು ತಿಂಗಳ ಒಳಗಾಗಿ ಶೈಕ್ಷಣಿಕ ದಾಖಲಾತಿಗಳನ್ನು ಸಂಬಂಧಪಟ್ಟ ಮಂಡಳಿಗೆ ನೀಡಬೇಕಾಗಿರುತ್ತದೆ. ಆದರೆ ಈ ಹುದ್ದೆಯು ಗುತ್ತಿಗೆ ಆಧಾರದಲ್ಲಿ ಇರಲಿದ್ದು, ಹಾಲಿ ಮುಖ್ಯಮಂತ್ರಿಯವರ ಪದಾವಧಿಯ ವರೆಗೆ ಅಥವಾ ಮುಂದಿನ ಆದೇಶದ ವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಕಚೇರಿಯಲ್ಲಿ ಗ್ರೂಪ್ ಸಿ ಹುದ್ದೆಗೆ ಹಿರಿಯ ಸಹಾಯಕ ಹುದ್ದೆಗೆ ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶವಿರುವುದಿಲ್ಲ. ಇದೀಗ ಬೇರೊಬ್ಬ ವ್ಯಕ್ತಿಯನ್ನು ಆ ಹುದ್ದೆಯಿಂದ ಬಿಡುಗಡೆಗೊಳಿಸಿ ಖಾಲಿಯಾದ ಹುದ್ದೆಗೆ ಪ್ರವೀಣ್ ಪತ್ನಿಯನ್ನು ನೇಮಕ ಮಾಡಿಕೊಳ್ಳಲು ಆದೇಶ ಮಾಡಲಾಗಿದೆ.
Praveen bellare murder case, wide given temporary job at CM Bommais office in Bangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm