ಬ್ರೇಕಿಂಗ್ ನ್ಯೂಸ್
01-10-22 10:29 am Mangalore Correspondent ಕರಾವಳಿ
ಮಂಗಳೂರು, ಅ.1 : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ತಹಸೀಲ್ದಾರ್ ಅವರ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ನನ್ನು ಬಂಧಿಸಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಿಬಿದ್ದಿದ್ದ.

ಜಾಗ ಮಾರಾಟಕ್ಕೆ ಸಲುವಾಗಿ ಎನ್ಓಸಿ ಕೇಳಿದ್ದ ಅರ್ಜಿದಾರನಲ್ಲಿ ಹತ್ತು ಸಾವಿರ ಲಂಚ ಕೇಳಿದ್ದ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಆಗಿ ಬಂಧಿಸಿತ್ತು. ಆರೋಪಿ ವಿಚಾರಣೆ ವೇಳೆ ತಹಸೀಲ್ದಾರ್ ಪರವಾಗಿ ಹಣ ಕೇಳಿದ್ದಾಗಿ ತಿಳಿಸಿದ್ದು ಅದರಂತೆ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಆರೋಪ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯೇ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಲೋಕಾಯುಕ್ತ ಬಂಧಿಸಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜೈಲಿಗಟ್ಟಿದೆ. ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್, ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಇತ್ತೀಚೆಗೆ ಲೋಕಾಯುಕ್ತಕ್ಕೆ ಫುಲ್ ಪವರ್ ಸಿಕ್ಕ ಬಳಿಕ ಮೊದಲ ಬಾರಿಗೆ ಲೋಕಾಯುಕ್ತ ಮಂಗಳೂರಿನಲ್ಲಿ ರೈಡ್ ಮಾಡಿದ್ದು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದೆ.
Mangalore Mini Vidhana Soudha Tahsildhar Purandar Hedge has been arrested by Lokayukta for demanding bribe. Assistant Tahsildhar Shivanand also was trapped by officers while he was caught taking a bribe red handed.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm