ಬ್ರೇಕಿಂಗ್ ನ್ಯೂಸ್
01-10-22 10:29 am Mangalore Correspondent ಕರಾವಳಿ
ಮಂಗಳೂರು, ಅ.1 : ಲಂಚದ ಹಣಕ್ಕೆ ಬೇಡಿಕೆ ಒಡ್ಡಿದ್ದ ಆರೋಪದಲ್ಲಿ ಮಂಗಳೂರು ತಹಸೀಲ್ದಾರ್ ಪುರಂದರ್ ಹೆಗ್ಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಗೆ ನಿನ್ನೆ ದಾಳಿ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು, ತಹಸೀಲ್ದಾರ್ ಅವರ ಸಹಾಯಕ ಅಧಿಕಾರಿ ಶಿವಾನಂದ ನಾಟೇಕರ್ ನನ್ನು ಬಂಧಿಸಿದ್ದರು. ಲಂಚ ಸ್ವೀಕರಿಸುವಾಗಲೇ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಿಬಿದ್ದಿದ್ದ.
ಜಾಗ ಮಾರಾಟಕ್ಕೆ ಸಲುವಾಗಿ ಎನ್ಓಸಿ ಕೇಳಿದ್ದ ಅರ್ಜಿದಾರನಲ್ಲಿ ಹತ್ತು ಸಾವಿರ ಲಂಚ ಕೇಳಿದ್ದ ಆರೋಪದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಯನ್ನು ಲೋಕಾಯುಕ್ತ ರೆಡ್ ಹ್ಯಾಂಡ್ ಆಗಿ ಬಂಧಿಸಿತ್ತು. ಆರೋಪಿ ವಿಚಾರಣೆ ವೇಳೆ ತಹಸೀಲ್ದಾರ್ ಪರವಾಗಿ ಹಣ ಕೇಳಿದ್ದಾಗಿ ತಿಳಿಸಿದ್ದು ಅದರಂತೆ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಆರೋಪ ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯೇ ತಹಸೀಲ್ದಾರ್ ಪುರಂದರ ಹೆಗ್ಡೆ ಅವರನ್ನು ಲೋಕಾಯುಕ್ತ ಬಂಧಿಸಿದ್ದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ ಜೈಲಿಗಟ್ಟಿದೆ. ಲೋಕಾಯುಕ್ತ ಎಸ್ಪಿ ಲಕ್ಷ್ಮಿಗಣೇಶ್, ಡಿವೈಎಸ್ಪಿ ಚಲುವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಇತ್ತೀಚೆಗೆ ಲೋಕಾಯುಕ್ತಕ್ಕೆ ಫುಲ್ ಪವರ್ ಸಿಕ್ಕ ಬಳಿಕ ಮೊದಲ ಬಾರಿಗೆ ಲೋಕಾಯುಕ್ತ ಮಂಗಳೂರಿನಲ್ಲಿ ರೈಡ್ ಮಾಡಿದ್ದು ಭ್ರಷ್ಟರ ಎದೆಯಲ್ಲಿ ನಡುಕ ಹುಟ್ಟಿಸಿದೆ.
Mangalore Mini Vidhana Soudha Tahsildhar Purandar Hedge has been arrested by Lokayukta for demanding bribe. Assistant Tahsildhar Shivanand also was trapped by officers while he was caught taking a bribe red handed.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm