ಬ್ರೇಕಿಂಗ್ ನ್ಯೂಸ್
05-10-22 11:01 pm Mangalore Correspondent ಕರಾವಳಿ
ಮಂಗಳೂರು, ಅ.5 : ಎರಡು ವರ್ಷಗಳಲ್ಲಿ ಕೊರೊನಾ ಇದ್ದ ಕಾರಣವೋ ಏನೋ.. ಈ ಬಾರಿ ಮಂಗಳೂರು ದಸರಾಕ್ಕೆ ಸಂಜೆಯಾಗುತ್ತಲೇ ಕಾಲಿಡಲು ಜಾಗ ಇರಲಿಲ್ಲ. ಅದ್ದೂರಿತನಕ್ಕೆ ಮತ್ತೊಂದು ಹೆಸರು ಎನ್ನುವಂತೆ ನಡೆದುಬಂದ ಮಂಗಳೂರು ದಸರಾಕ್ಕೆ ಈ ಬಾರಿ ಎಣೆಯೇ ಇರಲಿಲ್ಲ.
ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಒಂಬತ್ತು ದಿನಗಳ ಕಾಲ ಪೂಜೆಗೊಳ್ಳುವ ನವದುರ್ಗೆಯರು ಮತ್ತು ಶಾರದೆ, ಗಣಪತಿಯ ವಿಗ್ರಹದ ಮೆರವಣಿಗೆ ವಿಜಯದಶಮಿಯ ದಿನ ಎಂದಿನಂತೆ ಅದ್ದೂರಿಯಾಗಿ ನಡೆಯಿತು. ಕುದ್ರೋಳಿ ಕ್ಷೇತ್ರದಲ್ಲಿ ದೇವಸ್ಥಾನದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಮೆರವಣಿಗೆಗೆ ಚಾಲನೆ ನೀಡಿದರು. ಸಂಜೆ ಐದು ಗಂಟೆ ವೇಳೆಗೆ ಮೆರವಣಿಗೆ ಆರಂಭಗೊಂಡರೂ, ಶೋಭಾಯಾತ್ರೆಗೆ ಸ್ತಬ್ಧಚಿತ್ರಗಳು ಸಾಥ್ ನೀಡಲಿಲ್ಲ. ಈ ಹಿಂದೆಲ್ಲ ನವದುರ್ಗೆಯರ ಮೆರವಣಿಗೆಗೂ ಮುಂದಿನಿಂದ ಇತರೇ ಸ್ತಬ್ಧಚಿತ್ರಗಳು ಸಾಗಿ ಬರುತ್ತಿದ್ದವು. ಮಣ್ಣಗುಡ್ಡ, ಲೇಡಿಹಿಲ್ ನಲ್ಲಿ ಮೆರವಣಿಗೆ ಸೇರುತ್ತಿದ್ದ ಸ್ತಬ್ಧಚಿತ್ರಗಳು ಈ ಬಾರಿ ದೇವರ ವಿಗ್ರಹದ ಮುಂದಿನಿಂದ ಸಾಗಿ ಬರಲಿಲ್ಲ.












ಸಾವಿರಾರು ಜನರು ಸಂಜೆಯೇ ಲಾಲ್ ಬಾಗ್, ಬಳ್ಳಾಲ್ ಬಾಗ್ ನಲ್ಲಿ ಬಂದು ನಿಂತಿದ್ದರೂ ರಾತ್ರಿ ಹತ್ತುವರೆ ಕಳೆದರೂ ಮೆರವಣಿಗೆ ಲಾಲ್ ಬಾಗ್ ಬಂದು ತಲುಪಲಿಲ್ಲ. ಹೀಗಾಗಿ ಜನರು ಕಾದು ನಿರಾಶೆಯಾಗಿದ್ದರು. ಶಾರದೆಯ ಜೊತೆಗೆ ಸಾಗಬೇಕೆಂಬ ಕೆಲವು ತಂಡಗಳ ಧಾವಂತ, ಕೆಲವರ ಪ್ರತಿಷ್ಠೆಗಳು ಮೇಳೈಸಿದ ಕಾರಣ ಜನರು ರಾತ್ರಿಯಾದರೂ ಸ್ತಬ್ಧಚಿತ್ರಗಳು ನೋಡಲು ಸಿಗಲಿಲ್ಲ. ಹತ್ತು ಗಂಟೆ ವೇಳೆಗೆ ಲೇಡಿಹಿಲ್, ಲಾಲ್ ಬಾಗ್ ವೃತ್ತದಿಂದ ಬಳ್ಳಾಲ್ ಬಾಗ್ ಪಿವಿಸ್ ಉದ್ದಕ್ಕೆ ಲಕ್ಷಾಂತರ ಜನರು ಸೇರಿದ್ದರು. ಇದೇ ಮೊದಲ ಬಾರಿಗೆ ಎನ್ನುವಂತೆ ಈ ಪರಿ ಜನರು ಸೇರಿದ್ದರು.




ಸ್ಥಳೀಯರಲ್ಲದೆ, ಹೊರ ರಾಜ್ಯಗಳ ಕಾರ್ಮಿಕರು, ಉತ್ತರ ಭಾರತದ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು. ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಲ್ಲಿ ದಸರಾ ಶೋಭಾಯಾತ್ರೆಗೆ ಎಂದಿನ ವೈಭವ ಇರಲಿಲ್ಲ. ಹೀಗಾಗಿ ಜನರು ಮೈಸೂರು ದಸರಾಕ್ಕಿಂತಲೂ ಹೆಚ್ಚೆಂಬಂತೆ ಸೇರಿದ್ದರು.
Kudroli Dasara in Mangalore, lakhs of people gather for celebration.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm