ಬ್ರೇಕಿಂಗ್ ನ್ಯೂಸ್
08-10-22 10:06 pm Mangalore Correspondent ಕರಾವಳಿ
ಉಳ್ಳಾಲ, ಅ.8 : ಕಾನೂನು ಬಾಹಿರ ಕಟ್ಟಡದ ಕ್ಷೇಮ ಕಾಪಾಡಲು ಕಳೆದ ಮೂರು ವರ್ಷಗಳಿಂದ ಸುಭಾಸ್ ನಗರ ಎಂಬಲ್ಲಿ ರಸ್ತೆ ಬದಿಯಲ್ಲಿ ವ್ಯವಹಾರ ನಡೆಸುತ್ತಿದ್ದ ಮಿಲ್ಕ್ ಪಾರ್ಲರ್ ಬೂತನ್ನ ತೆರವುಗೊಳಿಸಲು ಮುನ್ನೂರು ಗ್ರಾಮ ಪಂಚಾಯತ್ ಮುಂದಾಗಿದ್ದು, ಬೂತ್ ಮಾಲೀಕರು ಹೈಕೋರ್ಟ್ ನಿಂದ ತಡೆಯಾಜ್ಞೆ ತಂದು ಪಂಚಾಯತಿಗೆ ತಿರುಗೇಟು ನೀಡಿದ್ದಾರೆ.
ಮುನ್ನೂರು ಪಂಚಾಯತ್ ವ್ಯಾಪ್ತಿಯ ಸುಭಾಷ್ ನಗರದಲ್ಲಿ ಉಷಾ ಶೆಟ್ಟಿ ಎಂಬವರು ಮೂರು ವರ್ಷಗಳ ಹಿಂದೆ ಶ್ರೀ ಕಟಿಲೇಶ್ವರಿ ನಂದಿನಿ ಡಿಪೋ ಆರಂಭಿಸಿದ್ದರು. 2019-20ನೇ ಸಾಲಿನಲ್ಲಿ ಪಂಚಾಯತ್ ಪರವಾನಿಗೆಯನ್ನೂ ನೀಡಿತ್ತು. ಇತ್ತೀಚೆಗೆ ಮಿಲ್ಕ್ ಡಿಪೋ ಹಿಂಭಾಗದಲ್ಲಿ ಕಾನೂನು ಬಾಹಿರವಾಗಿ ನಿರ್ಮಾಣಗೊಂಡ ಖಾಸಗಿ ಕಟ್ಟಡ ಉದ್ಘಾಟನೆಗೆ ಸಜ್ಜಾಗಿದೆ. ಹಾಲಿನ ಬೂತ್ನಿಂದ ಕಟ್ಟಡಕ್ಕೆ ಸಮಸ್ಯೆ ಆಗುತ್ತದೆ ಎಂದು ಕಟ್ಟಡ ಮಾಲೀಕರು ಪಂಚಾಯತಿಗೆ ದೂರು ನೀಡಿದ್ದಾರೆ.

ಅಕ್ರಮ ಕಟ್ಟಡದ ಮಾಲೀಕನ ಕ್ಷೇಮ ಕಾಪಾಡುವ ದೃಷ್ಟಿಯಲ್ಲಿ ಪಂಚಾಯತ್ ಪಿಡಿಓ ರವೀಂದ್ರ ರಾಜೀವ್ ನಾಯ್ಕ್ , ಅಧ್ಯಕ್ಷರಾದ ವಿಲ್ಫ್ರೆಡ್ ಡಿಸೋಜ ಮತ್ತು ಸಿಬ್ಬಂದಿ ಶನಿವಾರ ಹಾಲಿನ ಬೂತ್ ತೆರವಿಗೆ ಆಗಮಿಸಿದ್ದರು. ಪಂಚಾಯತ್ ನಿರ್ಣಯದ ವಿರುದ್ಧ ಮಿಲ್ಕ್ ಪಾರ್ಲರ್ ಮಾಲೀಕರು ಹೈಕೋರ್ಟ್ನಿಂದ ತಡೆಯಾಜ್ನೆ ತಂದಿದ್ದು ಅದರ ಪ್ರತಿಯನ್ನು ಬೂತ್ಗೆ ಅಂಟಿಸಿದ್ದರು.

ಪಂಚಾಯತ್ ಪಿಡಿಓ ಕ್ರಮವನ್ನ ವಿರೋಧಿಸಿ ಸ್ಥಳೀಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುಭಾಷ್ ನಗರದಲ್ಲಿ ಕಾನೂನು ಬಾಹಿರವಾಗಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡಕ್ಕೆ ಸೆಟ್ಬ್ಯಾಕ್ ಸಹಿತ ಯಾವುದೇ ವ್ಯವಸ್ಥೆ ಇಲ್ಲ. ದೊಡ್ಡವರ ಮುಂದೆ ಮಂಡಿ ಊರಿ ಕುಳಿತಿರುವ ಪಂಚಾಯತ್ ಪಿಡಿಒ ಬಡವರ ಬೂತ್ ತೆರವುಗೊಳಿಸುವುದಾದರೆ ಸರ್ಕಾರಿ ಜಮೀನಿನಲ್ಲಿರುವ ಎಲ್ಲಾ ಗೂಡಂಗಡಿಗಳನ್ನ ತೆರವುಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಹೈಕೋರ್ಟ್ ತಡೆ ಇದ್ದರೂ ಮುನ್ನೂರು ಪಿಡಿಒ ಮಿಲ್ಕ್ ಪಾರ್ಲರನ್ನ ಜಬರ್ದಸ್ತಿಯಲ್ಲಿ ತೆರವುಗೊಳಿಸಲು ಮುಂದಾಗಿದ್ದು ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ ಪರಿಣಾಮ ಹಿಂದಿರುಗಿದ್ದಾರೆ.ಕುರುಡು ಕಾಂಚಾಣಕ್ಕೆ ಮುನ್ನೂರು ಪಂಚಾಯತ್ ಪಿಡಿಓ ಮತ್ತು ಅಧ್ಯಕ್ಷರು ಏನು ಮಾಡಲೂ ರೆಡಿ ಎಂದು ಈ ಮೊದಲೇ ಜಾಲತಾಣಗಳಲ್ಲದೆ, ಮನೆ, ಮನೆಗಳಿಗೆ ಗ್ರಾಮಸ್ಥರು ಕರಪತ್ರಗಳನ್ನು ಹಂಚಿ ಆಕ್ರೋಶ ವ್ಯಕ್ತಪಡಿಸಿದ್ದರು.
Thokottu Munnur Village Panchayath alleged of supporting illegal construction of the building. Also a stay order has been brought over Milk Parlour to not vacate from the building.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm