ಬ್ರೇಕಿಂಗ್ ನ್ಯೂಸ್
11-10-22 10:32 pm Mangalore Correspondent ಕರಾವಳಿ
ಮಂಗಳೂರು, ಅ.11: ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮದಲ್ಲಿ ರಾಮಚಂದ್ರ ಭಟ್ ಎಂಬವರ ಮನೆಯ ಹೊರಗೆ ಇರಿಸಿದ್ದ ಓಮ್ನಿ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ನಕ್ಸಲರು ಬೆಂಕಿ ಹಚ್ಚಿದ್ದ ಪ್ರಕರಣದಲ್ಲಿ ಆರೋಪಿತನಾಗಿ ಗುರುತಿಸಿದ್ದ ತುಮಕೂರು ಮೂಲದ ಚಿನ್ನಿ ರಮೇಶ್ ಅಲಿಯಾಸ್ ಶಿವಕುಮಾರ್ ಕೋರ್ಟಿನಲ್ಲಿ ಸಾಕ್ಷ್ಯಗಳ ಕೊರತೆಯಿಂದ ಖುಲಾಸೆಗೊಂಡಿದ್ದಾನೆ.
2013ರ ನವೆಂಬರ್ 9ರಂದು ನಸುಕಿನಲ್ಲಿ ತನ್ನ ಮನೆಗೆ ಬಂದಿದ್ದ ನಕ್ಸಲರು ಮನೆಯ ಬಾಗಿಲು ಬಡಿದು, ಹೊರಗೆ ಬಾರದೇ ಇದ್ದಾಗ ಹೊರಗಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ್ದರು ಎಂದು ರಾಮಚಂದ್ರ ಭಟ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಪ್ರಕರಣದಲ್ಲಿ ನಕ್ಸಲರಾದ ವಿಕ್ರಂ ಗೌಡ, ಚಿನ್ನಿ ರಮೇಶ್, ಸಾವಿತ್ರಿ, ಸುಂದರಿ, ವಿಜಯ್, ಜಯಣ್ಣ ಮತ್ತು ಇತರರು ಸೇರಿಕೊಂಡು ಕೃತ್ಯ ಎಸಗಿದ್ದಾಗಿ ಹೇಳಲಾಗಿತ್ತು. ಬೆಂಕಿ ಹಚ್ಚಿದ್ದರಿಂದ 2.65 ಲಕ್ಷ ರೂ. ಮೌಲ್ಯದ ಕಾರು ಮತ್ತು ಬೈಕ್ ಸುಟ್ಟು ನಷ್ಟ ಉಂಟಾಗಿದ್ದಾಗಿ ಪೊಲೀಸರು ಮಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಆರೋಪಿಗಳ ವಿರುದ್ಧ ಯುಎಪಿಎ - ಸೆಕ್ಷನ್ 10(ಬಿ) ಮತ್ತು ಶಸ್ತ್ರಾಸ್ತ್ರ ಕಾಯ್ದೆ, ಐಪಿಸಿ ಸೆಕ್ಷನ್ 143, 147, 148, 447, 435, 427 ಜೊತೆಗೆ 149 ಅಡಿ ಪೊಲೀಸರು ಕೇಸು ದಾಖಲಿಸಿದ್ದರು. ಮೊದಲಿಗೆ ತನಿಖೆ ನಡೆಸಿದ್ದ ಆಗಿನ ಬಂಟ್ವಾಳ ಡಿವೈಎಸ್ಪಿ ರವೀಶ್, ಆರೋಪಿಗಳ ಪತ್ತೆ ಸಾಧ್ಯವಾಗಿಲ್ಲ ಎಂದು ನ್ಯಾಯಾಲಯಕ್ಕೆ 2017ರ ಜ.17ರಂದು ಸಿ ರಿಪೋರ್ಟ್ ಸಲ್ಲಿಸಿದ್ದರು. ಆನಂತರ ಉಡುಪಿ ಎಸ್ಪಿಯಾಗಿದ್ದ ಅಣ್ಣಾಮಲೈ ಬೆಂಗಳೂರಿನಲ್ಲಿ ಬೇರೊಂದು ಪ್ರಕರಣದಲ್ಲಿ ಬಂಧಿತನಾಗಿದ್ದ ನಕ್ಸಲ್ ಚಿನ್ನಿ ರಮೇಶ್ ಎಂಬಾತನನ್ನು ವಶಕ್ಕೆ ಪಡೆದು, ರಾಮಚಂದ್ರ ಭಟ್ ಮನೆಯ ಆವರಣದಲ್ಲಿ ಕಿಚ್ಚಿಟ್ಟ ಪ್ರಕರಣದಲ್ಲಿ ಆರೋಪಿಯೆಂದು ಸೂಚಿಸಿ ಮರು ತನಿಖೆಗೆ ಆದೇಶ ಮಾಡಿದ್ದರು. ಮರು ತನಿಖೆ ನಡೆಸಿದ ಡಿವೈಎಸ್ಪಿ ರವೀಶ್ ಸಿಆರ್, ನಕ್ಸಲ್ ಚಿನ್ನಿ ರಮೇಶ್ ನನ್ನು ಬಂಧಿಸಿ ತರಾತುರಿಯಲ್ಲಿ ಕೋರ್ಟಿಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ಆರಂಭಿಸಿದ್ದ ಕೋರ್ಟ್, ಆರೋಪ ಪಟ್ಟಿಯಲ್ಲಿದ್ದ ಒಟ್ಟು 22 ಸಾಕ್ಷಿಗಳ ಪೈಕಿ 9 ಮಂದಿಯನ್ನು ಕರೆಸಿ ವಿಚಾರಣೆ ನಡೆಸಿತ್ತು. ಅದರಲ್ಲಿ 5 ಮಂದಿ ಪ್ರತ್ಯಕ್ಷ ಸಾಕ್ಷಿಗಳಾಗಿದ್ದರು. ಆರೋಪಿ ಪರವಾಗಿ ವಾದ ಮಂಡಿಸಿದ್ದ ವಕೀಲ ದಿನೇಶ್ ಹೆಗ್ಡೆ ಉಳೇಪಾಡಿ, 2013ರ ವೇಳೆಗೆ ಕುತ್ಲೂರು ಪ್ರದೇಶದಲ್ಲಿ ಸರಕಾರ ಅರಣ್ಯ ವಾಸಿಗಳನ್ನು ಒಕ್ಕಲೆಬ್ಬಿಸುತ್ತಿತ್ತು. ಸ್ಥಳೀಯವಾಗಿ ರಾಮಚಂದ್ರ ಭಟ್ ಅರಣ್ಯ ವಾಸಿಗಳನ್ನು ಒಕ್ಕಲೆಬ್ಬಿಸುವ ಪರವಾಗಿದ್ದರು. ಇದಕ್ಕಾಗಿ ನಕ್ಸಲರು ಕಾಡಿನ ಜನರ ಪರವಾಗಿ ರಾಮಚಂದ್ರ ಭಟ್ ಮನೆಗೆ ಬಂದು ಕೃತ್ಯ ಎಸಗಿದ್ದಾರೆಂದು ದೂರಲಾಗಿತ್ತು. ಆದರೆ ಈ ಕೃತ್ಯ ಎಸಗಿರುವುದಕ್ಕೂ, ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿರುವ ಚಿನ್ನಿ ರಮೇಶ್ ಗೂ ಯಾವುದೇ ಸಂಬಂಧ ಇಲ್ಲವೆಂದು ವಾದ ಮಂಡಿಸಿದ್ದರು.
ಪ್ರಕರಣದಲ್ಲಿ ಪೊಲೀಸರು ಒದಗಿಸಿದ್ದ ಸಾಕ್ಷ್ಯದಲ್ಲಿಯೂ ಆರೋಪಿಯನ್ನು ಗುರುತಿಸಲು ಸಾಧ್ಯವಾಗದೇ ಇದ್ದುದು ಮತ್ತು ಆರೋಪ ಸಾಬೀತುಪಡಿಸುವ ಸಾಕ್ಷ್ಯಗಳು ಇರದೇ ಇದ್ದುದರಿಂದ ಜಿಲ್ಲಾ ನ್ಯಾಯಾಧೀಶ ರವೀಂದ್ರ ಜೋಷಿ, ಆರೋಪಿ ಚಿನ್ನಿ ರಮೇಶ್ ನನ್ನು ನಿರಪರಾಧಿಯೆಂದು ಆರೋಪದಿಂದ ಖುಲಾಸೆ ಮಾಡಿದೆ. ಸದ್ರಿ ಪ್ರಕರಣದಲ್ಲಿ ಚಿನ್ನಿ ರಮೇಶ್ ನನ್ನು ಮಾತ್ರ ಆರೋಪಿಯೆಂದು ಗುರುತಿಸಿ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದರು. ಉಳಿದ ಆರೋಪಿಗಳನ್ನು ತಲೆಮರೆಸಿಕೊಂಡವರೆಂದು ಹೇಳಿದ್ದರು. ಚಿನ್ನಿ ರಮೇಶ್ ವಿರುದ್ಧ ಚಿಕ್ಕಮಗಳೂರಿನಲ್ಲಿ ದಾಖಲಾದ ನಾಲ್ಕು ಪ್ರಕರಣಗಳು ವಿಚಾರಣೆಯಲ್ಲಿದ್ದು ಪ್ರಸಕ್ತ ಬೆಂಗಳೂರು ಜೈಲಿನಲ್ಲಿದ್ದಾನೆ.
Mangalore Naxal chinni ramesh from Belthangady proved innocent after police failed to submit enough evidence.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 07:09 pm
HK News Desk
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
15-11-25 07:42 pm
Mangalore Correspondent
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
Kumapal Dog Attack, Ullal, Mangalore: ಕುಂಪಲ ಬ...
14-11-25 11:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm