ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am