ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 11:55 am
HK News Staffer
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm