ಬ್ರೇಕಿಂಗ್ ನ್ಯೂಸ್
10-10-20 05:51 pm Mangaluru Correspondent ಕರಾವಳಿ
ಮಂಗಳೂರು, ಅ.10: ನವರಾತ್ರಿ ವೇಳೆ ಹುಲಿವೇಷಗಳ ಅಬ್ಬರ ಕಾಮನ್. ಆದರೆ ಈ ಬಾರಿ ಕೊರೊನಾ ಕಾರಣದಿಂದ ಹುಲಿವೇಷ ಕುಣಿತಕ್ಕೆ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದು ಕರಾವಳಿಯಲ್ಲಿ ಹುಲಿವೇಷ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹುಲಿವೇಷ ಆಡಂಬರಕ್ಕಲ್ಲ. ಅದು ತುಳುನಾಡಿನ ಸಂಸ್ಕೃತಿ. ಹಾಗಾಗಿ ಕೊರೊನಾ ಕಾರಣಕ್ಕೆ ಹುಲಿವೇಷ ನಿಲ್ಲಿಸಬಾರದು. ಸರಳ ರೀತಿಯಲ್ಲಿ ದೇವರ ಸೇವೆಗೆ ಹುಲಿವೇಷ ತಂಡಗಳಿಗೆ ಅವಕಾಶ ನೀಡಬೇಕು ಎಂದು ಮಂಗಳಾದೇವಿ ದಸರಾ ಶೋಭಾಯಾತ್ರೆ ಸಮಿತಿ ಒತ್ತಾಯಿಸಿದೆ.

ಸಮಿತಿಯ ಅಧ್ಯಕ್ಷ ದಿಲ್ರಾಜ್ ಆಳ್ವ ಸುದ್ದಿಗೋಷ್ಟಿಯಲ್ಲಿ ಈ ಒತ್ತಾಯ ಮಾಡಿದ್ದು, ಜಿಲ್ಲಾಡಳಿತ ಕೋವಿಡ್ ಹಿನ್ನೆಲೆಯಲ್ಲಿ ಹುಲಿವೇಷ ಕುಣಿತಕ್ಕೆ ನಿಷೇಧ ಹೇರಿದ್ದು ಸರಿಯಲ್ಲ. ಮಂಗಳಾದೇವಿ ಉತ್ಸವದ ಸಮಯದಲ್ಲಿ ಹಿಂದಿನಿಂದಲೂ ರಥೋತ್ಸವಕ್ಕೆ ಹುಲಿವೇಷ ಹಾಕುವ ಸಂಪ್ರದಾಯ ಇದೆ. ಈ ಸಂಪ್ರದಾಯವನ್ನು ನಿಲ್ಲಿಸುವಂತೆ ಆಗಬಾರದು. ಸಾಂಕೇತಿಕವಾಗಿ ದೇವರ ಸೇವೆ ನಡೆಸಲು ಅವಕಾಶ ನೀಡಬೇಕು. ಹುಲಿವೇಷವನ್ನು ವ್ರತ ಹಿಡಿದು ನಡೆಸುವ ಮಂದಿ ಇದ್ದಾರೆ. ಪ್ರತಿ ವರ್ಷವೂ ವೇಷ ಹಾಕುವವರೂ ಇದ್ದಾರೆ. ನವರಾತ್ರಿಗೂ ಹುಲಿವೇಷಕ್ಕೂ ಹತ್ತಿರದ ನಂಟು ಇದ್ದು ಭಾವನಾತ್ಮಕ ವಿಚಾರವಾಗಿದೆ ಎಂದು ಹೇಳಿದರು.
ಸಮಿತಿಯ ಉಪಾಧ್ಯಕ್ಷ ದಿನೇಶ್ ಕುಂಪಲ ಮಾತನಾಡಿ, ಈ ಬಾರಿ ಹುಲಿವೇಷ ಕೇವಲ ಹರಕೆ ಮಾತ್ರಕ್ಕೆ ನಡೆಸಲಾಗುವುದು. ಯಾವುದೇ ಆದಾಯ ಗಳಿಸುವ, ಮನರಂಜನೆ ಉದ್ದೇಶಕ್ಕಾಗಿ ಹುಲಿವೇಷ ಇರುವುದಿಲ್ಲ. ನವರಾತ್ರಿಯ ಮೆರವಣಿಗೆಯಲ್ಲಿ ಹುಲಿ ವೇಷಧಾರಿಗಳು ನರ್ತನ ಮಾಡುವುದು ಇಲ್ಲಿನ ಸಂಪ್ರದಾಯ. ಹುಲಿವೇಷ ಇಲ್ಲದ ದಸರಾ, ಜಂಬೂ ಸವಾರಿ ಇಲ್ಲದ ಮೈಸೂರು ದಸರಾದಂತೆ ಎಂದು ಬೇಸರ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಗಿರೀಶ್ ಶೆಟ್ಟಿ, ಉಪಾಧ್ಯಕ್ಷರಾದ ಹನೀಷ್ ಎನ್. ಬೋಳಾರ್ ಮೊದಲಾದವರು ಉಪಸ್ಥಿತರಿದ್ದರು.
Mangaladevi Dasara Shobayatrey urges for pilivesha this Navaratri in Mangalore after the government restricted for pilivesha, the tiger dance, during this Navaratri festival.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm