ಬ್ರೇಕಿಂಗ್ ನ್ಯೂಸ್
13-10-22 08:22 pm Mangalore Correspondent ಕರಾವಳಿ
ಮಂಗಳೂರು, ಅ.13 : ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತದ ಜನಸಮೂಹದ ಹೋರಾಟವಾಗಿ ಪರಿವರ್ತನೆಗೊಂಡಿದೆ. ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವುದು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿರುವುದರ ಫಲ. ಒಟ್ಟಾರೆ ಬಿಜೆಪಿ ಆಡಳಿತದ ಜನದ್ರೋಹಿ ಧೋರಣೆಯನ್ನು ಸುರತ್ಕಲ್ ಟೋಲ್ ಸುಲಿಗೆ ಬಹಿರಂಗಗೊಳಿಸಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಗುರುವಾರ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೇಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಬೆಂಬಲಿಸಿ ನಡೆಸಿದ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಎರಡನ್ನೂ ಮಾರಾಟಕ್ಕಿಟ್ಟಿರುವ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸದ, ಟೋಲ್ ಮಾಫಿಯಾಗಳ ರಕ್ಷಣೆಗೆ ನಿಲ್ಲುವ ಬಿಜೆಪಿ ಸರಕಾರ, ಇಲ್ಲಿನ ಶಾಸಕರು ಶ್ರಮಜೀವಿ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾರೆ. ಜನತೆ ಇಂತಹ ಪಿತೂರಿಗಳಿಗೆ ಬಲಿಯಾಗದೆ ಜನಪರ ಹೋರಾಟಗಳನ್ನು ಬೆಂಬಲಿಸಬೇಕು ಎಂದು ವಿನಂತಿಸಿದರು.
ಸ್ಥಳೀಯ ನಗರಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದಕ್, ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ವಿಲ್ಲಿ ವಿಲ್ಸನ್, ಪ್ರಧಾನ ಕಾರ್ಯದರ್ಶಿ ಬಿ.ಕೆ ಇಮ್ತಿಯಾಜ್ ಮಾತನಾಡಿದರು. ಡಿವೈಎಫ್ಐ ಮುಖಂಡ ರಫೀಕ್ ಹರೇಕಳ, ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಹರೇಕಳ, ಶ್ರಮಿಕರ ಸಂಘದ ಮುಖಂಡರಾದ ಫಾರೂಕ್ ಉಳ್ಳಾಲ, ಮಜೀದ್ ಯು.ಬಿ, ಮಾಧವ ಕಾವೂರ್, ಸಿದ್ದಿಕ್ ಬೆಂಗರೆ, ಪಿ.ಟಿ ಮೊಹಮ್ಮದ್, ಪುತ್ತುಂಜಿ ಮಂಜನಾಡಿ, ಟೆಂಪೋ ಚಾಲಕರ ಸಂಘದ ಪ್ರಮುಖರಾದ ದೇವದಾಸ್, ಒಣ ಮೀನು ಕಾರ್ಮಿಕರ ವಿಭಾಗದ ಮೊಹಮ್ಮದ್ ಮೋನು, ರಫೀಕ್ ನಂದಾವರ, ಮಯ್ಯದ್ದಿ ಬೆಂಗರೆ, ಹಕೀಮ್ ಬೆಂಗರೆ, ರಫೀಕ್ ಬೆಂಗ್ರೆ ಉಪಸ್ಥಿತರಿದ್ದರು.
Muneer katipalla slams BJP for not keeping it's promise in vacating Surathkal toll plaza.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm