ಬ್ರೇಕಿಂಗ್ ನ್ಯೂಸ್
13-10-22 08:22 pm Mangalore Correspondent ಕರಾವಳಿ
ಮಂಗಳೂರು, ಅ.13 : ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸಮಸ್ತದ ಜನಸಮೂಹದ ಹೋರಾಟವಾಗಿ ಪರಿವರ್ತನೆಗೊಂಡಿದೆ. ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವುದು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿರುವುದರ ಫಲ. ಒಟ್ಟಾರೆ ಬಿಜೆಪಿ ಆಡಳಿತದ ಜನದ್ರೋಹಿ ಧೋರಣೆಯನ್ನು ಸುರತ್ಕಲ್ ಟೋಲ್ ಸುಲಿಗೆ ಬಹಿರಂಗಗೊಳಿಸಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.
ಗುರುವಾರ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಹಳೇಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಬೆಂಬಲಿಸಿ ನಡೆಸಿದ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ, ಶಿಕ್ಷಣ ಎರಡನ್ನೂ ಮಾರಾಟಕ್ಕಿಟ್ಟಿರುವ, ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸದ, ಟೋಲ್ ಮಾಫಿಯಾಗಳ ರಕ್ಷಣೆಗೆ ನಿಲ್ಲುವ ಬಿಜೆಪಿ ಸರಕಾರ, ಇಲ್ಲಿನ ಶಾಸಕರು ಶ್ರಮಜೀವಿ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ರಾಜಕೀಯ ಲಾಭ ಪಡೆದುಕೊಳ್ಳುತ್ತಾರೆ. ಜನತೆ ಇಂತಹ ಪಿತೂರಿಗಳಿಗೆ ಬಲಿಯಾಗದೆ ಜನಪರ ಹೋರಾಟಗಳನ್ನು ಬೆಂಬಲಿಸಬೇಕು ಎಂದು ವಿನಂತಿಸಿದರು.






ಸ್ಥಳೀಯ ನಗರಪಾಲಿಕೆ ಸದಸ್ಯ ಅಬ್ದುಲ್ ಲತೀಫ್ ಕಂದಕ್, ಬಂದರು ಶ್ರಮಿಕರ ಸಂಘದ ಅಧ್ಯಕ್ಷರಾದ ವಿಲ್ಲಿ ವಿಲ್ಸನ್, ಪ್ರಧಾನ ಕಾರ್ಯದರ್ಶಿ ಬಿ.ಕೆ ಇಮ್ತಿಯಾಜ್ ಮಾತನಾಡಿದರು. ಡಿವೈಎಫ್ಐ ಮುಖಂಡ ರಫೀಕ್ ಹರೇಕಳ, ಗ್ರಾಮ ಪಂಚಾಯತ್ ಸದಸ್ಯ ಅಶ್ರಫ್ ಹರೇಕಳ, ಶ್ರಮಿಕರ ಸಂಘದ ಮುಖಂಡರಾದ ಫಾರೂಕ್ ಉಳ್ಳಾಲ, ಮಜೀದ್ ಯು.ಬಿ, ಮಾಧವ ಕಾವೂರ್, ಸಿದ್ದಿಕ್ ಬೆಂಗರೆ, ಪಿ.ಟಿ ಮೊಹಮ್ಮದ್, ಪುತ್ತುಂಜಿ ಮಂಜನಾಡಿ, ಟೆಂಪೋ ಚಾಲಕರ ಸಂಘದ ಪ್ರಮುಖರಾದ ದೇವದಾಸ್, ಒಣ ಮೀನು ಕಾರ್ಮಿಕರ ವಿಭಾಗದ ಮೊಹಮ್ಮದ್ ಮೋನು, ರಫೀಕ್ ನಂದಾವರ, ಮಯ್ಯದ್ದಿ ಬೆಂಗರೆ, ಹಕೀಮ್ ಬೆಂಗರೆ, ರಫೀಕ್ ಬೆಂಗ್ರೆ ಉಪಸ್ಥಿತರಿದ್ದರು.
Muneer katipalla slams BJP for not keeping it's promise in vacating Surathkal toll plaza.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm