ಬ್ರೇಕಿಂಗ್ ನ್ಯೂಸ್
14-10-22 01:55 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ಬೆದರಿಕೆ ಒಡ್ಡಿದ ಘಟನೆ ನಡೆದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ ಹರೀಶ್ ಪೂಂಜ ಬೆಂಗಳೂರಿನಿಂದ ವಿಮಾನದ ಮೂಲಕ ಗುರುವಾರ ಸಂಜೆ ಮಂಗಳೂರಿಗೆ ಮರಳಿದ್ದು ಸರ್ಕಿಟ್ ಹೌಸ್ ನಲ್ಲಿ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಳಿಕ ರಾತ್ರಿ 11 ಗಂಟೆ ವೇಳೆಗೆ ಮಂಗಳೂರಿನಿಂದ ಖಾಸಗಿ ಕಾರಿನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಇನ್ನೊಂದು ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಶಾಸಕರನ್ನು ಉದ್ದೇಶಿಸಿ ಅವಾಚ್ಯ ಪದಗಳಿಂದ ನಿಂದಿಸಿ, ತಲವಾರು ತೋರಿಸಿ ಬೆದರಿಸಿದ್ದಾನೆ.
ಶಾಸಕ ಹರೀಶ್ ಪೂಂಜ ಅವರ ಅಧಿಕೃತ ಕಾರು ಹಿಂದಿನಿಂದ ತೆರಳುತ್ತಿತ್ತು. ಹರೀಶ್ ಪೂಂಜ ತನ್ನ ಕಾರು ಬಿಟ್ಟು ಸಂಬಂಧಿಯೋರ್ವರ ಕಾರಿನಲ್ಲಿ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ, ಪಡೀಲ್ ಬಳಿಯ ಅಡ್ಯಾರ್ ಫ್ಲೈ ಓವರ್ ಬಳಿ ನಿಲ್ಲಿಸಿದ್ದ ಸ್ಕಾರ್ಪಿಯೋ ಕಾರು ಹಿಂಬಾಲಿಸಿದ್ದು ಫರಂಗಿಪೇಟೆಯಲ್ಲಿ ಅಡ್ಡಗಟ್ಟಿ ಅವಾಚ್ಯ ಪದಗಳಿಂದ ನಿಂದಿಸಿದ್ದಾನೆ. ಶಾಸಕರಿದ್ದ ಕಾರನ್ನು ಫರಂಗಿಪೇಟೆಯಲ್ಲಿ ಪೊಲೀಸ್ ಔಟ್ ಪೋಸ್ಟ್ ಇರುವಲ್ಲಿ ಸೈಡಿಗೆ ಹಾಕುತ್ತಿದ್ದಂತೆ ಅವ್ಯಾಚ್ಯವಾಗಿ ಬೈದು ಬಿಸಿ ರೋಡ್ ಕಡೆಗೆ ಪರಾರಿಯಾಗಿದೆ. ಶಾಸಕರಿದ್ದ ಕಾರಿನಲ್ಲಿ ಪ್ರಶಾಂತ್ ಮತ್ತು ಕುಶಿತ್ ಎಂಬಿಬ್ಬರಿದ್ದರು. ಕುಶಿತ್ ಕಾರು ಚಲಾಯಿಸುತ್ತಿದ್ದು ಅವರನ್ನುದ್ದೇಶಿಸಿ ವ್ಯಕ್ತಿ ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದಾರೆ.
Miscreants reportedly waylaid the car of Belthangady MLA Harish Poonja flashed swords. The incident was reported in the outskirts of the city at Farangipete on Thursday October 13.The incident took place while the MLA was returning from Bengaluru to Belthangady.The miscreants had followed the car from Padil to Farangipete.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm