ಬ್ರೇಕಿಂಗ್ ನ್ಯೂಸ್
14-10-22 04:56 pm Mangalore Correspondent ಕರಾವಳಿ
ಉಳ್ಳಾಲ, ಅ.14 : ಬ್ಯಾಂಕ್ ಉದ್ಯೋಗಿಯೋರ್ವರು ಮನೆಯಲ್ಲಿ ಪತ್ನಿ, ಮಕ್ಕಳಿಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಠಾಣೆ ವ್ಯಾಪ್ತಿಯ ಮುಚ್ಚಿಲ ಕೋಡಿ ಎಂಬಲ್ಲಿ ನಡೆದಿದೆ.
ಕೊಣಾಜೆ, ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ(37) ಆತ್ಮಹತ್ಯೆಗೈದ ಯುವಕ. ಚರಣ್ ಅವರು ಕರ್ನಾಟಕ ಬ್ಯಾಂಕ್ ನ ಪಚ್ಚನಾಡಿ ಶಾಖೆಯಲ್ಲಿ ಅಟೆಂಡರ್ ಆಗಿದ್ದರು. ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಅವರು ಮದ್ಯ ವ್ಯಸನಕ್ಕೆ ದಾಸರಾಗಿ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.
ಪತ್ನಿ ಮತ್ತು ಇಬ್ಬರು ಮಕ್ಕಳು ನವರಾತ್ರಿಗೆಂದು ತವರು ಮನೆಗೆ ತೆರಳಿದ್ದರು. ನಿನ್ನೆ ಚರಣ್ ಅವರು ಪತ್ನಿಯ ಮನೆಗೆ ತೆರಳಿ ಮಕ್ಕಳನ್ನು ಮಾತನಾಡಿಸಿ ಬಂದಿದ್ದರಂತೆ.
ಚರಣ್ ಅವರ ತಾಯಿ ಶಾಲಾ ಬಸ್ಸಲ್ಲಿ ಕಂಡಕ್ಟರ್ ಆಗಿದ್ದು ಇಂದು ಬೆಳಗ್ಗೆ ಬೇಗನೆ ಕೆಲಸಕ್ಕೆ ತೆರಳಿದ್ದಾರೆ. ಬಳಿಕ ಚರಣ್ ಅವರು ಸಾಕು ನಾಯಿಯನ್ನ ಹಿಡಿದು ವಾಕಿಂಗ್ ತೆರಳಿದ್ದರಂತೆ. ಮಧ್ಯಾಹ್ನ ಚರಣ್ ಅವರ ಮೊಬೈಲಿಗೆ ಪತ್ನಿ ಕರೆ ಮಾಡಿದ್ದು ಸ್ವೀಕರಿಸದೇ ಇದ್ದಾಗ ಮುಚ್ಚಿಲ ಕೋಡಿಯ ನೆರೆಹೊರೆಯವರಲ್ಲಿ ವಿಚಾರಿಸಿದ್ದಾರೆ. ನೆರೆ ಹೊರೆಯವರು ಮನೆಯನ್ನ ಪರಿಶೀಲಿಸಿದಾಗ ಚರಣ್ ರಾಜ್ ನೇಣು ಬಿಗಿದಿದ್ದು ಅವರನ್ನ ರಕ್ಷಿಸಲು ಆಸ್ಪತ್ರೆಗೆ ಕೊಂಡೊಯ್ದರೂ ಅದಾಗಲೇ ಅಸುನೀಗಿದ್ದಾರೆ.
ಮೃತ ಚರಣ್ ರಾಜ್ ಅವರಿಗೆ ಆರು ತಿಂಗಳ ಮತ್ತು ಮೂರು ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೊಣಾಜೆ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
Ullal 37 year old Bank employee commits suicide in Mangalore , financial crises suspected. The deceased has been identified as Charan Raj Shetty (37).
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am