ಬ್ರೇಕಿಂಗ್ ನ್ಯೂಸ್
14-10-22 06:25 pm Mangalore Correspondent ಕರಾವಳಿ
ಮಂಗಳೂರು, ಅ.14 : ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹಿರಿಯ ನೈರ್ಮಲ್ಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಲಿಂಗ ಕೊಂಡಗುಳಿ ಎಂಬ ಭ್ರಷ್ಟ ಅಧಿಕಾರಿಯ ಮೇಲೆ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಕಪಾಳಮೋಕ್ಷ ಮಾಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದ ಕಾರಣಕ್ಕೆ ಆರೋಪಿ ಅಧಿಕಾರಿಗೆ ನಾಲ್ಕು ವರ್ಷಗಳ ಶಿಕ್ಷೆ ಮತ್ತು ಒಂದು ಕೋಟಿ ರೂಪಾಯಿ ದಂಡ ವಿಧಿಸಿದೆ.
ಶಿವಲಿಂಗ ಕೊಂಡಗುಳಿ ಭ್ರಷ್ಟ ಅಧಿಕಾರಿಯಾಗಿದ್ದಲ್ಲದೆ, ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಹತ್ತಾರು ವರ್ಷಗಳಿಂದ ಝಂಡಾ ಊರಿ ಲಂಚ ತಿಂದು ತೇಗಿದ್ದ. 2013ರಲ್ಲಿ ಹೆಚ್ಚಿನ ಪ್ರಮಾಣದ ಆಸ್ತಿ ಗಳಿಸಿದ್ದಾಗಿ ಖಚಿತ ಮಾಹಿತಿಗಳೊಂದಿಗೆ ಲೋಕಾಯುಕ್ತ ಅಧಿಕಾರಿಗಳು ಈತನ ಮನೆಗೆ ದಾಳಿ ನಡೆಸಿದ್ದರು. ಪರಿಶೀಲನೆ ಸಂದರ್ಭದಲ್ಲಿ ಜಮೀನು, ಬಂಗಾರ ಸೇರಿ ನಿಗದಿತ ಆದಾಯಕ್ಕಿಂತ ಹೆಚ್ಚುವರಿಯಾಗಿ 70 ಲಕ್ಷ ರೂ. ಮೌಲ್ಯದ ಆಸ್ತಿ ಗಳಿಸಿರುವುದು ಪತ್ತೆಯಾಗಿತ್ತು.

ಆಗಿನ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಜಿ. ಶೇಟ್ ತನಿಖೆ ನಡೆಸಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು, ಆರೋಪಿ ಅಧಿಕಾರಿ ಅಕ್ರಮ ಆಸ್ತಿ ಗಳಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಅ.14 ರಂದು ತೀರ್ಪು ನೀಡಿದ್ದಾರೆ.
ಲೋಕಾಯುಕ್ತ ಕಾಯ್ದೆಯಡಿ ದಾಖಲಾದ ಸೆಕ್ಷನ್ 13(1) ಇ ಮತ್ತು ಲಂಚ ವಿರೋಧಿ ಕಾಯ್ದೆ 13(2) ಪ್ರಕರಣದಲ್ಲಿ ಆರೋಪಿ ಶಿವಲಿಂಗ ಕೊಂಡಗುಳಿಗೆ ನಾಲ್ಕು ವರ್ಷಗಳ ಸಜೆ ಪ್ರಕಟಿಸಿದ್ದಾರೆ. ಅಲ್ಲದೆ, ಅಕ್ರಮ ಗಳಿಸಿದ ಸಂಪತ್ತನ್ನು ಸರಕಾರಕ್ಕೆ ಹಿಂದಿರುಗಿಸುವ ಸಲುವಾಗಿ ಒಂದು ಕೋಟಿ ರೂಪಾಯಿ ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಒಂದು ವರ್ಷ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕೆಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

ಶಿವಲಿಂಗ ಕೊಂಡಗುಳಿ 2013ರಲ್ಲಿ ಒಮ್ಮೆಗೆ ಕರ್ತವ್ಯದಿಂದ ಅಮಾನತು ಆಗಿದ್ದರೂ, ಆನಂತರ ಅದೇ ಜಾಗಕ್ಕೆ ಬಂದು ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಒಂಬತ್ತು ವರ್ಷಗಳಿಂದಲೂ ಕರ್ತವ್ಯ ನಿರ್ವಹಿಸುತ್ತಿದ್ದ. ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಶಿವಲಿಂಗ ವಿರುದ್ಧ ಕೋರ್ಟ್ ಶಿಕ್ಷೆ ಪ್ರಕಟಿಸುತ್ತಿದ್ದಂತೆ ಭ್ರಷ್ಟ ಅಧಿಕಾರಿಯನ್ನು ಪೊಲೀಸರು ಕೈತೋಳ ತೊಡಿಸಿ ಜೈಲಿಗೆ ಒಯ್ದಿದ್ದಾರೆ.
Mangalore MCC corrupted officer Shivalinga punished with four years of jail and one crore fine.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am