ಬ್ರೇಕಿಂಗ್ ನ್ಯೂಸ್
14-10-22 07:53 pm Mangalore Correspondent ಕರಾವಳಿ
ಮಂಗಳೂರು, ಅ.14 : ಸುರತ್ಕಲ್ ಟೋಲ್ ಗೇಟ್ ತೆರವು ಮಾಡಲೇಬೇಕೆಂದು ವಿರೋಧಿ ಹೋರಾಟ ಕಾವು ಪಡೆಯುತ್ತಿದ್ದಂತೆ ಜಿಲ್ಲಾಡಳಿತ ಎಚ್ಚತ್ತುಕೊಂಡಿದೆ. ಅಕ್ಟೋಬರ್ 18ರಂದು ಟೋಲ್ ಗೇಟ್ ಮುತ್ತಿಗೆ ಹೋರಾಟಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು ವಿವಿಧ ಸಂಘಟನೆಗಳ ಪ್ರತಿನಿಧಿಗಳು ಒಕ್ಕೊರಳ ಆಗ್ರಹ ಮುಂದಿಟ್ಟಿದ್ದಾರೆ. ಈ ನಡುವೆ, ಜಿಲ್ಲಾಡಳಿತ ಸಂಘಟನೆ ನಾಯಕರ ಜೊತೆಗೆ ನಡೆಸಿದ ಮಾತುಕತೆಯೂ ವಿಫಲವಾಗಿದೆ. ಹೆದ್ದಾರಿ ಅಧಿಕಾರಿಗಳು ಶೀಘ್ರದಲ್ಲೇ ಟೋಲ್ ಗೇಟ್ ತೆರವು ಮಾಡುತ್ತೇವೆಂದು ಜಿಲ್ಲಾಧಿಕಾರಿ ಜೊತೆಗಿನ ಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ನಿಶ್ಚಿತ ದಿನಾಂಕ ಪ್ರಕಟಿಸದೆ ಮೀನ ಮೇಷದ ಹೇಳಿಕೆಯನ್ನು ನಂಬುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.
ಶುಕ್ರವಾರ ಜಿಲ್ಲಾಡಳಿತದ ಪರವಾಗಿ ಪಣಂಬೂರು ಎಸಿಪಿ ಕಚೇರಿಯಲ್ಲಿ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಎಸಿಪಿ ಮಹೇಶ್ ಕುಮಾರ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ ಸಭೆಯಲ್ಲಿ ಉಪಸ್ಥಿತರಿದ್ದರು.


ಜಿಲ್ಲಾಡಳಿತದ ಕಡೆಯಿಂದ ಅದೇ ಹಳೇ ರಾಗವನ್ನು ಮುಂದಿಡಲಾಗಿತ್ತು. ಸುರತ್ಕಲ್ ಟೋಲ್ ಗೇಟ್ ತೆರವು ಪ್ರಕ್ರಿಯೆಯ ಆಡಳಿತಾತ್ಮಕ ಕೆಲಸ ನಡೆಯುತ್ತಿದೆ. ತೆರವುಗೊಳಿಸಲು ತೀರ್ಮಾನ ಆಗಿದೆ. ಇನ್ನು ಕೆಲವು ದಿನಗಳಲ್ಲಿ ತೆರವು ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ. ಅಲ್ಲಿಯವರೆಗೆ ಹೋರಾಟ ಕೈ ಬಿಡುವಂತೆ ಹೋರಾಟ ಸಮಿತಿಯನ್ನು ಅಧಿಕಾರಿಗಳು ವಿನಂತಿಸಿದರು. ಟೋಲ್ ತೆರವಿನ ನಿರ್ದಿಷ್ಟ ದಿನಾಂಕ ಪ್ರಕಟಿಸದೆ ಎಂದಿನಂತೆ ಕೆಲವೇ ದಿನಗಳಲ್ಲಿ ತೆರವು ಎಂಬ ಬಾಯಿ ಮಾತಿನ ಭರವಸೆ ಮಾತ್ರ ನೀಡಲಾಯಿತು.


ಕೇವಲ ಭರವಸೆ ಕಾರಣಕ್ಕೆ ಹೋರಾಟ ಕೈಬಿಡಲ್ಲ
ಕಳೆದ ಆರು ವರ್ಷಗಳಲ್ಲಿ ಟೋಲ್ ಗೇಟ್ ತೆರವಿನ ಬಗ್ಗೆ ಹಲವು ಭರವಸೆಗಳನ್ನು ನೀಡಲಾಗಿದೆ. ಜನಪ್ರತಿನಿಧಿಗಳು, ವಿಧಾನಸಭೆಯಲ್ಲಿಯೂ ತಿಂಗಳೊಳಗೆ ಟೋಲ್ ಗೇಟ್ ತೆರವು ಎಂಬ ಹೇಳಿಕೆ ನೀಡಿದ್ದಾರೆ. ಆದರೆ ಆ ಹೇಳಿಕೆಗಳು ಜಾರಿಗೆ ಬಂದಿಲ್ಲ. ಈಗಲೂ ಭರವಸೆ ಜಾರಿಗೆ ಬರುತ್ತದೆ ಎಂಬ ವಿಶ್ವಾಸ ಜನತೆಗೆ ಇಲ್ಲ. ಆದುದರಿಂದ ಟೋಲ್ ಸಂಗ್ರಹ ಸ್ಥಗಿತಗೊಳ್ಳದೆ ಹೋರಾಟ ಹಿಂಪಡೆಯಲು ಸಾಧ್ಯವಿಲ್ಲ. ಎರಡೂ ಜಿಲ್ಲೆಗಳ ನೂರಾರು ಸಂಘಟನೆಗಳು ಅಕ್ಟೋಬರ್ 18 ರ ಮುತ್ತಿಗೆ ತೀರ್ಮಾನವನ್ನು ಬೆಂಬಲಿಸಿವೆ. ಟೋಲ್ ಸಂಗ್ರಹ ಸ್ಥಗಿತಗೊಳ್ಳದೆ, ಕೇವಲ ಭರವಸೆ ಆಧಾರದಲ್ಲಿ ಹೋರಾಟ ಮುಂದೂಡಲು ಜನತೆ ಒಪ್ಪವುದಿಲ್ಲ ಎಂದು ಹೋರಾಟ ಸಮಿತಿ ಪರವಾಗಿ ಪಾಲ್ಗೊಂಡಿದ್ದವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.


ಟೋಲ್ ಸಂಗ್ರಹ ತಕ್ಷಣ ಕೈಬಿಡಿ
ಆದುದರಿಂದ ಟೋಲ್ ಸಂಗ್ರಹವನ್ನು ತಕ್ಷಣ ಕೈಬಿಡಬೇಕು. ಸರಕಾರದ ಹೇಳಿಕೆಯ ಪ್ರಕಾರ ಇನ್ನು ಕೆಲವೇ ದಿನದಲ್ಲಿ ತೆರವಿಗೆ ಬೇಕಾದ ಪ್ರಕ್ರಿಯೆ ಪೂರ್ಣಗೊಳ್ಳುವುದಾದರೆ, ಅಲ್ಲಿಯವರೆಗೆ ಟೋಲ್ ಸಂಗ್ರಹವನ್ನು ಕೈಬಿಡಿ. ಅದರಿಂದ ದೊಡ್ಡ ನಷ್ಟವೇನೂ ಆಗುವುದಿಲ್ಲ. ಏಳು ವರ್ಷಗಳಿಂದ ನೂರಾರು ಕೋಟಿ ರೂಪಾಯಿ ಸುರತ್ಕಲ್ ಟೋಲ್ ಗೇಟ್ ಹೆಸರಲ್ಲಿ ಸಂಗ್ರಹಿಸಲಾಗಿದೆ. ಅಕ್ಟೋಬರ್ 18 ರ ಟೋಲ್ ಗೇಟ್ ಮುತ್ತಿಗೆ ಶಾಂತಿಯುತ ನಡೆಸಲಿದ್ದೇವೆ. ಟೋಲ್ ಸಂಗ್ರಹ ಸ್ಥಗಿತಗೊಂಡಿರುವುದು ಖಾತರಿಗೊಳ್ಳುವ ವರೆಗೆ ಮುತ್ತಿಗೆ ಮುಂದುವರಿಯಲಿದೆ. ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಸ್ಥಗಿತಗೊಳ್ಳದೆ ಈ ಬಾರಿಯ ಹೋರಾಟ ಮುಗಿಯುವುದಿಲ್ಲ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.
Mangalore October 18th last date for vacating illegal Surathkal toll warns DYFI.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am