ಬ್ರೇಕಿಂಗ್ ನ್ಯೂಸ್
14-10-22 08:36 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿದ ಪ್ರಕರಣದಲ್ಲಿ ಬಂಟ್ವಾಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಮಂಗಳೂರಿನ ಫಳ್ನೀರ್ ನಿವಾಸಿ ರಿಯಾಜ್ ಮತ್ತು ಆತ ಚಲಾಯಿಸುತ್ತಿದ್ದ ಸ್ಕಾರ್ಪಿಯೋ ಕಾರನ್ನು ವಶಕ್ಕೆ ಪಡೆಯಲಾಗಿದೆ. ಆತನ ಕಾರನ್ನು ಮುಂದಕ್ಕೆ ರಸ್ತೆಯಲ್ಲಿ ಓವರ್ ಟೇಕ್ ಮಾಡಿ ಹೋಗಲು ಬಿಡದೇ ಇದ್ದುದಕ್ಕೆ ಬೈದುಕೊಂಡು ತೆರಳಿದ್ದಾಗಿ ಪೊಲೀಸರಲ್ಲಿ ತಿಳಿಸಿದ್ದಾನೆ. ಕಾರಿನಲ್ಲಿ ಶಾಸಕರಿದ್ದ ಬಗ್ಗೆ ತಿಳಿದಿರಲಿಲ್ಲ ಎಂದಿದ್ದಾನೆ. ಕಾರಿನಲ್ಲಿ ಯಾವುದೇ ಆಯುಧ ಸಿಕ್ಕಿಲ್ಲ. ಅಲ್ಲದೆ, ಆರೋಪಿ ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಶಾಸಕ ಹರೀಶ್ ಪೂಂಜ ಗುರುವಾರ ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳುತ್ತಿದ್ದಾಗ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲವಾರು ತೋರಿಸಿದ್ದಾಗಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿತ್ತು. ಶಾಸಕರ ಕಾರು ಚಾಲಕ ನವೀನ್ ದೂರು ನೀಡಿದ್ದರು. ಈ ಬಗ್ಗೆ ಹೇಳಿಕೆ ನೀಡಿದ್ದ ಹರೀಶ್ ಪೂಂಜ, ಜಿಹಾದಿಗಳಿಗೆ ಹೆದರಲ್ಲ. ಅವರ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಬೆದರಿಕೆ ಹಾಕಿದ್ದಾರೆ. ಗೃಹ ಸಚಿವರು ಫೋನ್ ಮಾಡಿ ಭದ್ರತೆ ನೀಡುವುದಾಗಿ ತಿಳಿಸಿದ್ದಾರೆಂದು ಹೇಳಿದ್ದರು. ಕೇರಳ ನೋಂದಣಿಯ ಕಾರು ಅದಾಗಿತ್ತು ಎಂದೂ ಹೇಳಿದ್ದರು.
ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಶಾಸಕರಿಗೆ ಬೆದರಿಕೆ ಹಾಕುವ ಉದ್ದೇಶ ಇರಲಿಲ್ಲ ಎನ್ನುವುದು ಮೇಲ್ನೋಟಕ್ಕೆ ಪೊಲೀಸರಿಗೆ ದೃಢಪಟ್ಟಿದೆ. ಶಾಸಕರು ಎಸ್ಕಾರ್ಟ್ ಪಡೆಯಲು ಈ ರೀತಿ ಬೆದರಿಕೆ ನಾಟಕ ಮಾಡಿದ್ದಾರೆ ಎಂದೂ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿಬಂದಿದ್ದವು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾರು ಅಡ್ಡಗಟ್ಟಿ ಬೆದರಿಕೆ ; ಫರಂಗಿಪೇಟೆ ಹೆದ್ದಾರಿಯಲ್ಲಿ ಕೃತ್ಯ
MLA Harish Poonja shown followed by unidentified car, car seized one held in Mangalore. The police have detained one person in connection with allegedly waylaying the car of Beltangady MLA Harish Poonja and flashing swords.The white Scorpio used for reportedly used for chasing the MLA's vehicle has also been seized.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm