ಬ್ರೇಕಿಂಗ್ ನ್ಯೂಸ್
14-10-22 10:38 pm Mangalore Correspondent ಕರಾವಳಿ
ಮಂಗಳೂರು, ಅ.14 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿದ ಘಟನೆ ಕೊಲೆ ಯತ್ನ ಅಥವಾ ದಾಳಿ ನಡೆಸಿದ್ದಲ್ಲ. ಓವರ್ ಟೇಕ್ ಮಾಡುವ ಭರದಲ್ಲಿ ನಡೆದ ಘಟನೆಯಾಗಿದೆ ಎಂದು ದ.ಕ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆಯಲ್ಲಿ ಸ್ಕಾರ್ಪಿಯೋ ಕಾರು ಮತ್ತು ಅದರ ಚಾಲಕನಾಗಿದ್ದ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದಿದ್ದ ಪೊಲೀಸರು ವಿಚಾರಣೆ ನಡೆಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ್ದ ಎಸ್ಪಿ ಸೋನವಾಣೆ, ಆರೋಪಿ ಬಳಿ ಯಾವುದೇ ಆಯುಧಗಳು ಪತ್ತೆಯಾಗಿಲ್ಲ. ಅಲ್ಲದೆ, ಆತನ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಘಟನೆ ಬಗ್ಗೆ ತನಿಖೆ ಮುಂದುವರಿಸುತ್ತೇವೆ ಎಂದು ಹೇಳಿದ್ದಾರೆ.
ಆರೋಪಿ ತನ್ನ ಕಾರಿನ ಮೇಲೆ ತಲವಾರು ಝಳಪಿಸಿದ್ದ ಎಂದು ಹರೀಶ್ ಪೂಂಜಾ ದೂರಿದ್ದರು. ಅಲ್ಲದೆ, ಶಾಸಕರ ಕಾರು ಚಾಲಕ ನವೀನ್ ನೀಡಿದ್ದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಲ್ಲದೆ, ಘಟನೆ ಹಿನ್ನೆಲೆಯಲ್ಲಿ ಗೃಹ ಸಚಿವರು ಶಾಸಕ ಪೂಂಜಾಗೆ ಗನ್ ಮ್ಯಾನ್ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದರು.
ಇದೀಗ ಘಟನೆ ಬಗ್ಗೆ ದ.ಕ. ಎಸ್ಪಿ ಋಷಿಕೇಶ್ ಸೋನಾವಣೆ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಸರ್ಕಾರದಿಂದ ಕಳುಹಿಸಿದ್ದ ಗನ್ ಮ್ಯಾನ್ ಅನ್ನು ಶಾಸಕ ಹರೀಶ್ ಪೂಂಜಾ ವಾಪಸ್ ಕಳುಹಿಸಿದ್ದಾರೆ. ಗೃಹ ಸಚಿವರ ಸೂಚನೆಯಂತೆ ಗನ್ ಮ್ಯಾನ್ ನೀಡಲಾಗಿತ್ತು. ಇದು ಕೊಲೆಯತ್ನ ಅಲ್ಲ, ಕೇವಲ ರೋಡ್ ರೇಜ್ ಎಂದು ಎಸ್ಪಿ ಸ್ಪಷ್ಟನೆ ನೀಡಿದ್ದರಿಂದ ಮುಜುಗರಗೊಂಡ ಹರೀಶ್ ಪೂಂಜಾ ಸರ್ಕಾರದಿಂದ ಒದಗಿಸಿದ್ದ ಗನ್ ಮ್ಯಾನನ್ನು ವಾಪಸ್ ಕಳುಹಿಸಿದ್ದಾರೆ.
MLA chased by Suspicious Scorpio car was just a road rage, no weapons were found clarifies SP of Mangalore.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm