ಬ್ರೇಕಿಂಗ್ ನ್ಯೂಸ್
15-10-22 09:52 pm Mangalore Correspondent ಕರಾವಳಿ
ಉಳ್ಳಾಲ, ಅ.15 : ಮುನ್ನೂರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಅವ್ಯವಹಾರಗಳೇ ತುಂಬಿದ್ದು, ಭಂಡಾರಬೈಲು ಸಮೀಪ ಅಕ್ರಮವಾಗಿ ಮರ ಕಡಿದು ಮಾರಾಟ ಮಾಡಿದ್ದಲ್ಲದೆ ರೈತರ ಕುಮ್ಕಿ ಜಾಗದ ಕುರಿತಾಗಿ ಸರಿಯಾದ ಕಾನೂನು ಜಾರಿ ಬರೋದಕ್ಕೂ ಮುನ್ನವೇ ರೈತರೊಬ್ಬರ ಕುಮ್ಕಿ ಜಾಗವನ್ನು ಸರಕಾರಿ ಜಾಗ ಎಂದು ಅತಿಕ್ರಮಣ ಮಾಡಿದ್ದು ಅಪರಾಧಿಗಳಿಗೆ ಕಾನೂನು ಪ್ರಕಾರ ತಕ್ಕ ಶಾಸ್ತಿ ಆಗುವ ತನಕ ಹೋರಾಟ ನಿಲ್ಲದು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ನ್ಯಾಯವಾದಿ ಶಾಂತಿಪ್ರಸಾದ್ ಹೆಗ್ಡೆ ಹೇಳಿದರು.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮ ಪಂಚಾಯತ್ ಆಡಳಿತವು ರೈತ ವಿರೋಧಿ ಆಡಳಿತ ನಡೆಸುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿದ್ದು ಭ್ರಷ್ಟರಿಗೆ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಉಳ್ಳಾಲ ಘಟಕದ ವತಿಯಿಂದ ಮುನ್ನೂರು ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಶನಿವಾರ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ರೈತರು ಒಗ್ಗಟ್ಟಾಗಿ ಜಾಗೃತರಾಬೇಕು. ಪರಿಸ್ಥಿತಿ ಹೇಗಿದೆ ಎಂದರೆ ಈ ಭ್ರಷ್ಟರಿಂದಾಗಿ ನಮ್ಮ ಭೂಮಿಯನ್ನು ಉಳಿಸಲು ನಾವು ಹೋರಾಟ ಮಾಡುವಂತಾಗಿದೆ ಎಂದರು. ಪಂಚಾಯತ್ ಅಧಿಕಾರಿಗಳಿಗೆ ಆರೋಗ್ಯ ಕೆಟ್ಟರೆ ಅವರ ಆಸ್ಪತ್ರೆ ಖರ್ಚನ್ನು ಸರಕಾರ ಭರಿಸುತ್ತದೆ, ಆದರೆ ದೇಶದ ಜನತೆಯ ಹೊಟ್ಟೆ ತುಂಬಿಸುವ ರೈತನ ಗೋಳನ್ನು ಯಾರಲ್ಲಿ ಹೇಳೋದು ಎಂದು ಪ್ರಶ್ನಿಸಿದರು.

ರೈತರ ಕುಮ್ಕಿ ಜಾಗದ ಕುರಿತಾದ ನೂತನ ಕಾನೂನು ಶೀಘ್ರದಲ್ಲೇ ಜಾರಿಗೆ ಬರಲಿದೆ. ಕುಮ್ಕಿ ಹಕ್ಕು ಇತ್ಯರ್ಥವಾಗುವುದಕ್ಕೆ ಮುನ್ನವೇ ಸರಕಾರಿ ಜಮೀನು ಎಂದು ಅತಿಕ್ರಮಣ ಮಾಡಿರುವ ಮುನ್ನೂರು ಗ್ರಾಮ ಪಂಚಾಯತ್ ಆಡಳಿತದಲ್ಲಿ ಭ್ರಷ್ಟಾಚಾರಗೈದವರೆಲ್ಲರಿಗೂ ಶಿಕ್ಷೆ ಆಗಲಿದೆ ಎಂದರು.
ಕಿಸಾನ್ ಸಂಘ ಮುನ್ನೂರು ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಶೆಟ್ಟಿ, ಮುಖಂಡರಾದ ಪ್ರೇಮಚಂದ್ರ ಶೆಟ್ಟಿ, ಶಿವರಾಜ್ ಕಾವ, ಬಾಬು ಶ್ರೀಶಾಸ್ತಾ ಕಿನ್ಯ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Mangalore Illegal sand mining in Ullal, farmers land being used for mining at Munnuru, farmers protest.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am